Wednesday, August 9, 2023

ಕಂಬದಾಳ್‌ ಹೊಸೂರು ಗ್ರಾ.ಪಂ. ಅಧ್ಯಕ್ಷ ನಿರ್ಮಲರಾಜು, ಉಪಾಧ್ಯಕ್ಷ ಸೋಮಶೇಖರಪ್ಪ

ಭದ್ರಾವತಿ ತಾಲೂಕಿನ ಕಂಬದಾಳ್ ಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ನಿರ್ಮಲರಾಜು ಹಾಗು ಉಪಾಧ್ಯಕ್ಷರಾಗಿ ಸೋಮಶೇಖರಪ್ಪ ಅವಿರೋಧವಾಗಿ ಆಯ್ಕೆಯಾದರು.
    ಭದ್ರಾವತಿ, ಆ. ೯ : ತಾಲೂಕಿನ ಕಂಬದಾಳ್ ಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ನಿರ್ಮಲರಾಜು ಹಾಗು ಉಪಾಧ್ಯಕ್ಷರಾಗಿ ಸೋಮಶೇಖರಪ್ಪ ಅವಿರೋಧವಾಗಿ ಆಯ್ಕೆಯಾದರು.
    ಪರಿಶಿಷ್ಟ ಜಾತಿ ಮಹಿಳೆ ಮೀಸಲಾತಿ ಹೊಂದಿರುವ  ಅಧ್ಯಕ್ಷ ಸ್ಥಾನಕ್ಕೆ ನಿರ್ಮಲರಾಜು  ಹಾಗು ಬಿಸಿಎಂ(ಎ) ಮೀಸಲಾತಿ ಹೊಂದಿರುವ ಉಪಾಧ್ಯಕ್ಷ ಸ್ಥಾನಕ್ಕೆ  ಸೋಮಶೇಖರಪ್ಪ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನು ಡಿಸಿಸಿ ಬ್ಯಾಂಕ್ ಪ್ರಭಾರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (ಪಿಎಲ್‌ಡಿ) ಬ್ಯಾಂಕ್ ಅಧ್ಯಕ್ಷ ಎಸ್. ವಿರೂಪಾಕ್ಷಪ್ಪ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಶಾಂತಕುಮಾರ್, ಯುವ ಮುಖಂಡ ಎಚ್.ಎಂ ಪ್ರದೀಪ್, ಮಣಿ  ಸೇರಿದಂತೆ ಇನ್ನಿತರರು  ಅಭಿನಂದಿಸಿದ್ದಾರೆ.

No comments:

Post a Comment