Wednesday, August 2, 2023

ಎಂಪಿಎಂ ಕಾರ್ಖಾನೆ ನಿವೃತ್ತ ನೌಕರ ಜಿ. ರಮೇಶ್‌ ನಿಧನ

ಜಿ. ರಮೇಶ್‌
    ಭದ್ರಾವತಿ, ಆ. ೨ : ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಉದ್ಯೋಗಿ, ಬೊಮ್ಮನಕಟ್ಟೆ ನಿವಾಸಿ ಜಿ. ರಮೇಶ್‌(೫೫) ಮಂಗಳವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಇದ್ದರು.  ಅನಾರೋಗ್ಯದಿಂದ ಬಳಲುತ್ತಿದ್ದ  ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
    ಎಂಪಿಎಂ ಕಾರ್ಖಾನೆಯಲ್ಲಿ ಫೋರ್‌ಮೆನ್‌ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಎಂಪಿಎಂ ಜೆಂಟ್ಸ್‌ ಕ್ಲಬ್‌ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ಎಂಪಿಎಂ ಕಾರ್ಖಾನೆ ನಿವೃತ್ತ ಕಾರ್ಮಿಕರು ಸಂತಾಪ ಸೂಚಿಸಿದ್ದಾರೆ.

No comments:

Post a Comment