ಭಾನುವಾರ, ಆಗಸ್ಟ್ 27, 2023

ಸ್ವ ಉದ್ಯೋಗ ಪ್ರೇರಣಾ ಶಿಬಿರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ಭದ್ರಾವತಿ ತಾಲೂಕಿನ ಅಂತರಗಂಗೆ ವಲಯದ ಗಾಂಧಿನಗರದ ವಿಘ್ನನೇಶ್ವರ ಜ್ಞಾನವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವ ಉದ್ಯೋಗ ಪ್ರೇರಣಾ ಶಿಬಿರ ಮಹಿಳಾ ಉದ್ಯಮಿ ಅನ್ನಪೂರ್ಣ ಸತೀಶ್‌ ಉದ್ಘಾಟಿಸಿದರು.
    ಭದ್ರಾವತಿ, ಆ. ೨೭:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ತಾಲೂಕಿನ ಅಂತರಗಂಗೆ ವಲಯದ ಗಾಂಧಿನಗರದ ವಿಘ್ನನೇಶ್ವರ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ ನಡೆಯಿತು.
    ಅನು ಗಾರ್ಮೆಂಟ್ಸ್ ಮಹಿಳಾ ಉದ್ಯಮಿ  ಅನ್ನಪೂರ್ಣ ಸತೀಶ್‌ ಶಿಬಿರ ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷೆ ವಿನೋದ ಅಧ್ಯಕ್ಷತೆ ವಹಿಸಿದ್ದರು.
    ಸ್ವ ಉದ್ಯೋಗಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆಯಲ್ಲಿ ಇರಬೇಕಾದ ಆಸಕ್ತಿ, ಮಾತುಗಾರಿಕೆ ಮತ್ತು ಆರ್ಥಿಕ ಸಹಾಯವನ್ನು ಬ್ಯಾಂಕುಗಳ ಮೂಲಕ ಪಡೆಯುವ ವಿಧಾನಗಳ ಕುರಿತು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ಸಂಸ್ಥೆ(ರುಡ್‌ ಸೆಟ್) ಹೊಳಲೂರು,  ನಿರ್ದೇಶಕ ಕಾಂತೇಶ್ ಅಂಬಿಗರ್ ಮಾಹಿತಿ ನೀಡಿದರು.
    ರುಡ್‌ ಸೆಟ್ ಸಂಸ್ಥೆಯಲ್ಲಿ ಪಡೆಯಬಹುದಾದ ತರಬೇತಿಗಳು, ಅವಧಿ ಮತ್ತು ಸಂಸ್ಥೆಯ ನಿಯಮಗಳನ್ನು ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ ರವರು ಮಾಹಿತಿ ನೀಡಿದರು.‌
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಮಾತನಾಡಿ,  ಸದಸ್ಯರು ಸ್ವಉದ್ಯೋಗ ಆರಂಭ ಮಾಡಿದಲ್ಲಿ ಮಾತ್ರ ಪಡೆದುಕೊಂಡ ತರಬೇತಿ ಫಲಪ್ರದವಾಗಲು ಸಾಧ್ಯ.  ಮಹಿಳೆಯರು ಸ್ವಉದ್ಯೋಗದಿಂದ ಸ್ವಾವಲಂಬಿಯಾಗಿ ಬದುಕಬೇಕೆಂದರು.
    ಸ್ವ ಉದ್ಯೋಗ ತರಬೇತಿದಾರರಾದ ಮಣಿ, ಶಾಲಾ ಮುಖ್ಯ ಶಿಕ್ಷಕ ನಾಗರಾಜ್, ವಲಯ ಮೇಲ್ವಿಚಾರಕರಾದ ಕುಮಾರ್, ಶ್ರೀನಿವಾಸ್,  ಜ್ಞಾನವಿಕಾಸ ಸಮನ್ವಯಧಿಕಾರಿಗಳಾದ ಪ್ರೀತಿ, ಸೌಮ್ಯ, ಸೇವಾಪ್ರತಿನಿಧಿ ಶ್ವೇತಾ, ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ