ಪರೀಕ್ಷಾಂಗ ಕುಲಸಚಿವರಿಗೆ ವಿದ್ಯಾರ್ಥಿಗಳಿಂದ ಮನವಿ
ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪ್ರಸ್ತುತ ಹೊರಡಿಸಲಾಗಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ಪ್ರತಿ ವಿಷಯಕ್ಕೂ ೨ ರಿಂದ ೩ ದಿನ ಅಂತರಗೊಳಿಸಿ ವಿದ್ಯಾರ್ಥಿಗಳು ಸಮರ್ಥವಾಗಿ ಪರೀಕ್ಷೆ ಎದುರಿಸಲು ಸಹಕರಿಸಬೇಕೆಂದು ವಿದ್ಯಾರ್ಥಿಗಳು ಪರೀಕ್ಷಾಂಗ ಕುಲಸಚಿವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ, ಆ. ೨೧: ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪ್ರಸ್ತುತ ಹೊರಡಿಸಲಾಗಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ಪ್ರತಿ ವಿಷಯಕ್ಕೂ ೨ ರಿಂದ ೩ ದಿನ ಅಂತರಗೊಳಿಸಿ ವಿದ್ಯಾರ್ಥಿಗಳು ಸಮರ್ಥವಾಗಿ ಪರೀಕ್ಷೆ ಎದುರಿಸಲು ಸಹಕರಿಸಬೇಕೆಂದು ವಿದ್ಯಾರ್ಥಿಗಳು ಪರೀಕ್ಷಾಂಗ ಕುಲಸಚಿವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ.
ಹೊರಡಿಸಲಾಗಿರುವ ವೇಳಾಪಟ್ಟಿಯಲ್ಲಿ ಯಾವುದೇ ಅಂತರವಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ಪ್ರತಿ ವಿಷಯಕ್ಕೂ ೨ ರಿಂದ ೩ ದಿನ ಅಂತರಗೊಳಿಸುವುದರಿಂದ ಹೆಚ್ಚಿನ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಕೋರಿಕೆಗೆ ಸ್ಪಂದಿಸುವಂತೆ ಎನ್ಎಸ್ಯುಐ ನೇತೃತ್ವದಲ್ಲಿ ಉಪ ಕುಲಸಚಿವ ಡಿಎಆರ್ ಮಂಜುನಾಥ್ ಮೂಲಕ ಕುಲಸಚಿವರಿಗೆ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳಾದ ಬಿ.ಎಂ ಪ್ರೀತಮ್ ಗೌಡ, ಎನ್. ಕೀರ್ತಿನಾಯ್ಕ್, ಕೆ.ಟಿ ರಮೇಶ್, ಕೆ.ಕೆ ಭೂಮಿಕಾ, ಯು. ಕಾವ್ಯ, ಪುಷ್ಪರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment