Tuesday, August 1, 2023

ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರಕ್ಕೆ ಖಂಡನೆ

ಹೆಚ್ಚಿನ ಕಾನೂನು ವ್ಯವಸ್ಥೆ ಜಾರಿಗೆ ಆಗ್ರಹ

ಕೇಂದ್ರ  ಹಾಗೂ ರಾಜ್ಯ ಸರ್ಕಾರಗಳು, ಮಹಿಳೆಯರ ಮಾನ, ಪ್ರಾಣ, ಭದ್ರತೆ ಹಾಗೂ ರಕ್ಷಣೆಗೆ ಹೆಚ್ಚಿನ ಕಾನೂನು ವ್ಯವಸ್ಥೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹಾಗು ಮಹಿಳೆಯರ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಂಗಳವಾರ ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಯಿತು.  
    ಭದ್ರಾವತಿ, ಆ. ೧ :  ಕೇಂದ್ರ  ಹಾಗೂ ರಾಜ್ಯ ಸರ್ಕಾರಗಳು, ಮಹಿಳೆಯರ ಮಾನ, ಪ್ರಾಣ, ಭದ್ರತೆ ಹಾಗೂ ರಕ್ಷಣೆಗೆ ಹೆಚ್ಚಿನ ಕಾನೂನು ವ್ಯವಸ್ಥೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹಾಗು ಮಹಿಳೆಯರ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ತಪ್ಪಿತಸ್ಥರಿಗೆ
    ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಂಗಳವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಯಿತು.  
    ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿಯ ಮಾನ ಹಾನಿ ಪ್ರಕರಣ ಹಾಗೂ ಮಣಿಪುರ ರಾಜ್ಯದಲ್ಲಿ ನಡೆದ ಮಹಿಳೆಯರ ದೌರ್ಜನ್ಯ, ಅತ್ಯಾಚಾರ ಹಾಗೂ ಬೆತ್ತಲೆ ಮೆರವಣಿಗೆ ಪ್ರಕರಣಗಳು, ಅಮಾನವೀಯ, ರೌದ್ರ ಹಾಗೂ ರಾಕ್ಷಸತನದ ಪರಮಾವಧಿ ಮೀರಿದಂತಹ ಹೇಯ ಕೃತ್ಯಗಳಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ನೀಚ ಕೃತ್ಯಗಳು ಮರುಕಳುಹಿಸದಂತೆ ಎಚ್ಚರವಹಿಸಬೇಕೆಂದು ಆಗ್ರಹಿಸಲಾಯಿತು.
    ತಹಸೀಲ್ದಾರ್‌ ಗ್ರೇಡ್‌-೨ ರಂಗಮ್ಮ ಅವರ ಮೂಲಕ ಮನವಿ ಸಲ್ಲಿಸಲಾಯಿತು. ವೇದಿಕೆ ಅಧ್ಯಕ್ಷೆ ಎಂ.ಎಸ್‌ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು. ಪದಾಧಿಕಾರಿಗಳಾದ ಪ್ರಧಾನ ಕಾರ್ಯದಶಿ ಲತಾ ಪ್ರಭಾಕರ್‌, ಉಪಾಧ್ಯಕ್ಷೆ ಸುಮ ಚಂದ್ರಶೇಖರ್‌, ಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿ ಕುಮಾರ್‌ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

No comments:

Post a Comment