Tuesday, August 29, 2023

ಶ್ರೀ ಆದಿಶಕ್ತಿ ಚೌಡೇಶ್ವರಿ ದೇವಾಲಯ ಲೋಕಾರ್ಪಣೆ

ಭದ್ರಾವತಿ ಆನೆಕೊಪ್ಪ, ಎಂಪಿಎಂ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಶಕ್ತಿ ಚೌಡೇಶ್ವರಿ ದೇವಾಲಯದ ಆಲಯ ಪ್ರವೇಶ ಮತ್ತು ಸ್ಥಿರಬಿಂಬ ಪ್ರತಿಷ್ಠಾಪನೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಈ ಸಂಬಂಧ ನೂತನ ವಿಗ್ರಹಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
    ಭದ್ರಾವತಿ, ಆ. 29: ನಗರದ ಆನೆಕೊಪ್ಪ, ಎಂಪಿಎಂ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಶಕ್ತಿ ಚೌಡೇಶ್ವರಿ ದೇವಾಲಯದ ಆಲಯ ಪ್ರವೇಶ ಮತ್ತು ಸ್ಥಿರಬಿಂಬ ಪ್ರತಿಷ್ಠಾಪನೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.
    ಬೆಳಿಗ್ಗೆ ನಾಗಪೂಜೆ, ಆಲಯ ಪ್ರವೇಶ, ಗೋ ಪೂಜೆ, ಮಹಾಪ್ರತಿಷ್ಠೆ, ನಂತರ ಚಂಡಿಕಾ ಹೋಮ, ಮಹಾಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ಶ್ರೀ ಕ್ಷೇತ್ರ ನಾಗರಕಟ್ಟೆ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
    ಆನೆಕೊಪ್ಪ, ಉಜ್ಜನಿಪುರ, ಕಾಗದನಗರ, ತಿಮ್ಲಾಪುರ, ಬುಳ್ಳಾಪುರ, ಜೆಪಿಎಸ್ ಕಾಲೋನಿ, ಸುರಗಿತೋಪು, ಹುಡ್ಕೋ ಕಾಲೋನಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತಾಧಿಗಳು ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾದರು.

No comments:

Post a Comment