Saturday, August 5, 2023

ಪಿಎಸ್‌ಟಿ ಶಿಕ್ಷಕರ ಅನ್ಯಾಯ ಸರಿಪಡಿಸಿ : ಮನವಿ

ಪಿಎಸ್‌ಟಿ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯ  ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಹಿತ ರಕ್ಷಣಾ ವೇದಿಕೆ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
     ಭದ್ರಾವತಿ, ಆ. ೬: ಪಿಎಸ್‌ಟಿ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯ  ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಹಿತ ರಕ್ಷಣಾ ವೇದಿಕೆ ತಾಲೂಕು ಶಾಖೆ ವತಿಯಿಂದ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 
ತಾಲೂಕಿನ ಪಿಎಸ್‌ಟಿ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ನಿಕಟ ಪೂರ್ವ ಸಿಆರ್‌ಪಿ ನಾಗರತ್ನಮ್ಮ, ಸಾಮಿತ್ರಿ ಬಾಯಿ ಪುಲೆ ಸಂಘದ ತಾಲೂಕು ಅಧ್ಯಕ್ಷೆ ಜೇನಮ್ಮ, ಹುಣಸೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಮಂಜುಳಮ್ಮ, ಸಿದ್ದಾಪುರ ತಾಂಡ ಸರ್ಕಾರಿ ಹಿರಿಯ ಪ್ರಾಥಮಿ ಶಾಲೆಯ ಡಿ. ಯಲ್ಲಪ್ಪ, ರುದ್ರೇಶ್‌, ಶಿವಕುಮಾರ ಸ್ವಾಮಿ ಸೇರಿದಂತೆ ಇನ್ನಿತರರ ನೇತೃತ್ವದಲ್ಲಿ  ಪ್ರತಿಭಟನೆ ನಡೆಸಿ  ತಮಗೆ ಆಗುತ್ತಿರುವ ಅನ್ಯಾಯ ತೋರ್ಪಡಿಸಿಕೊಂಡರು. 
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮ ೨೦೧೭, ತಿದ್ದುಪಡಿ ನಿಯಮ ೨೦೨೧ರಲ್ಲಿ ಆಗಿರುವ ಸಾಮಾಜಿಕ ತಾರತಮ್ಯ ಹಾಗು ಅನ್ಯಾಯಗಳನ್ನು ಸರಿಪಡಿಸಲು ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪುನರ್‌ ರಚಿಸುವಂತೆ ಕೋರಿದರು. 
ಮನವಿ ಸ್ವೀಕರಿಸಿದ  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮನವಿಯನ್ನು ಮೇಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದರು.  

No comments:

Post a Comment