ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ. ಜಯಣ್ಣ ಮತ್ತು ಉಪಾಧ್ಯಕ್ಷರಾಗಿ ಸಿದ್ದಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭದ್ರಾವತಿ, ಆ. ೧೨: ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ. ಜಯಣ್ಣ ಮತ್ತು ಉಪಾಧ್ಯಕ್ಷರಾಗಿ ಸಿದ್ದಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಂಚಾಯಿತಿಯಲ್ಲಿ ನಡೆದ ೨ನೇ ಅವಧಿಗೆ ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ಸಾಮಾನ್ಯ ಮೀಸಲಾತಿ ಹೊಂದಿರುವ ಅಧ್ಯಕ್ಷ ಸ್ಥಾನಕ್ಕೆ ಎಂ. ಜಯಣ್ಣ ಹಾಗು ಸಾಮಾನ್ಯ ಮಹಿಳೆ ಮೀಸಲಾತಿ ಹೊಂದಿರುವ ಉಪಾಧ್ಯಕ್ಷ ಸ್ಥಾನಕ್ಕೆ ಸಿದ್ದಮ್ಮ ಆಯ್ಕೆಯಾದರು.
ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಗಂಗಣ್ಣ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಓ) ಲಕ್ಷ್ಮೀಕಾಂತ್, ಕಾರ್ಯದರ್ಶಿ ಸತೀಶ್ ಗೌಡ ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಣಿಶೇಖರ್ ಹಾಗು ಕಾಂಗ್ರೆಸ್ ಪಕ್ಷದ ಮುಖಂಡರು, ಸ್ಥಳೀಯರು ಮತ್ತು ಪಂಚಾಯಿತಿ ಸದಸ್ಯರು ಅಭಿನಂದಿಸಿದ್ದಾರೆ.
No comments:
Post a Comment