Sunday, August 27, 2023

ಮೀನುಗಾರಿಕೆ ಇಲಾಖೆ ಹೊರಗುತ್ತಿಗೆ ನೌಕರರ ದಿಡೀರ್ ಪ್ರತಿಭಟನೆ

ಭದ್ರಾವತಿ ಬಿಆರ್‌ಪಿ ಮೀನುಗಾರಿಕೆ ಇಲಾಖೆಯ  ಹೊರಗುತ್ತಿಗೆ ನೌಕರರು ಇಎಸ್‌ಐ ಹಾಗು ಪಿಎಫ್‌ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
    ಭದ್ರಾವತಿ, ಆ. ೨೭ : ಬಿಆರ್‌ಪಿ ಮೀನುಗಾರಿಕೆ ಇಲಾಖೆಯ  ಹೊರಗುತ್ತಿಗೆ ನೌಕರರು ಇಎಸ್‌ಐ ಹಾಗು ಪಿಎಫ್‌ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
    ಇಲಾಖೆ ಕರ್ತವ್ಯ ನಿರ್ವಹಿಸುತ್ತಿರುವ  ಸುಮಾರು ೫೪ ಹೊರಗುತ್ತಿಗೆ ನೌಕರರಿಗೆ ಕಳೆದ ೩ ವರ್ಷಗಳಿಂದ ಗುತ್ತಿಗೆದಾರರು ಇಎಸ್‌ಐ ಹಾಗು ಪಿಎಫ್‌ ಸೌಲಭ್ಯ ನೀಡದೆ ವಂಚಿಸುತ್ತಿದ್ದಾರೆಂದು ಆರೋಪಿಸಲಾಯಿತು.
    ನೌಕರರು ಯೂನಿಕ್‌ ಸೆಕ್ಯೂರಿಟಿ ಏಜೆನ್ಸಿ ಗುತ್ತಿಗೆದಾರರ ವಿರುದ್ಧ ಬೆಳಿಗ್ಗೆ ಆರಂಭಿಸಿದ ಪ್ರತಿಭಟನೆ ಸಂಜೆವರೆಗೂ ಮುಂದುವರೆಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುತ್ತಿಗೆದಾರರಿಗೆ ತಕ್ಷಣ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು. ಈ ನಡುವೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದು ನೌಕರರನ್ನು ಮತ್ತಷ್ಟು ಆಕ್ರೋಶಗೊಳ್ಳುವಂತೆ ಮಾಡಿತು.
    ಹೊರಗುತ್ತಿಗೆ ನೌಕರರ ಸಮಸ್ಯೆ ತಕ್ಷಣ ಬಗೆಹರಿಸುವ ಮೂಲಕ ಸಂಕಷ್ಟದಲ್ಲಿರುವ ನೌಕರರ ಹಿತ ಕಾಪಾಡುವಂತೆ ಆಗ್ರಹಿಸಲಾಯಿತು.

No comments:

Post a Comment