Wednesday, August 2, 2023

ಮಹಿಳೆಯರ ರಕ್ಷಣೆ ಮುಂದಾಗಿ, ತಪ್ಪಿತಸ್ಥರ ಗಲ್ಲು ಶಿಕ್ಷೆ ವಿಧಿಸಿ

ವಿವಿಧ ಮಹಿಳಾ ಸಂಘಟನೆಗಳಿಂದ ರಾಜ್ಯಪಾಲರಿಗೆ ಮನವಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು  ಮಹಿಳೆಯರ ಮಾನ, ಪ್ರಾಣ, ಭದ್ರತೆ ಹಾಗೂ ರಕ್ಷಣೆಗೆ ಹೆಚ್ಚಿನ ಕಾನೂನು ಸುವ್ಯವಸ್ಥೆ ಜಾರಿಗೊಳಿಸುವ ಜೊತೆಗೆ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬುಧವಾರ  ಭದ್ರಾವತಿಯಲ್ಲಿ ವಿವಿಧ ಮಹಿಳಾ ಸಂಘಟನೆಗಳಿಂದ ತಹಸೀಲ್ದಾರ್‌ ಗ್ರೇಡ್‌-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಆ. ೨: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು  ಮಹಿಳೆಯರ ಮಾನ, ಪ್ರಾಣ, ಭದ್ರತೆ ಹಾಗೂ ರಕ್ಷಣೆಗೆ ಹೆಚ್ಚಿನ ಕಾನೂನು ಸುವ್ಯವಸ್ಥೆ ಜಾರಿಗೊಳಿಸುವ ಜೊತೆಗೆ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬುಧವಾರ  ವಿವಿಧ ಮಹಿಳಾ ಸಂಘಟನೆಗಳಿಂದ ತಹಸೀಲ್ದಾರ್‌ ಗ್ರೇಡ್‌-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ಮಹಿಳಾ ಪ್ರಮುಖರಾದ ಹೇಮಾವತಿ ವಿಶ್ವನಾಥ್‌, ಡಾ. ವಿಜಯದೇವಿ, ಎಂ.ಎಸ್‌ ಸುಧಾಮಣಿ, ರೂಪರಾವ್‌, ಆರ್.ಎಸ್‌ ಶೋಭಾ,  ರೂಪ ನಾಗರಾಜ್‌ ಸೇರಿದಂತೆ ಇನ್ನಿತರರು ಮಾತನಾಡಿ,  ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯಕೃತ್ಯ ಮನುಕುಲವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಉಡುಪಿ ಜಿಲ್ಲೆಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿಯರ ಮಾನ ಹಾನಿ ಪ್ರಕರಣ, ಮಂಗಳೂರಿನಲ್ಲಿ ದಲಿತ ಹೆಣ್ಣು ಮಗಳಿಗೆ ನಿರಂತರ ೪ ವರ್ಷ ಅತ್ಯಾಚಾರ ನಡೆಸಿರುವ  ಪ್ರಕರಣ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಮೇಲೆ  ನಿರಂತರವಾಗಿ ಅತ್ಯಾಚಾರ ಮತ್ತು ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ.  ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳು ಅಮಾನವೀಯ ಹಾಗೂ ರಾಕ್ಷಸತನದ ಪರಮಾವಧಿಯ ಹೇಯಕೃತ್ಯಗಳಾಗಿದ್ದು, ಇದನ್ನು ಲಿಂಗ ತಾರತಮ್ಯವಿಲ್ಲದೆ, ಜಾತಿ ಬೇಧವಿಲ್ಲದೆ, ರಾಜಕೀಯ ಬಣ್ಣ ಬಳಿಯದೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಇಡೀ ಮನುಕುಲವನ್ನು ಜಾಗೃತಗೊಳಿಸಬೇಕಾಗಿದೆ. ಇಂತಹ ಘಟನೆಗಳು ದೇಶದಲ್ಲಿ ಮತ್ತೆ ಮರುಕಳುಹಿಸದಂತೆ ಎಚ್ಚರವಹಿಸಬೇಕೆಂದು ಹಾಗು ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು  ಆಗ್ರಹಿಸಿದರು.
    ಹಳೇನಗರದ ಮಹಿಳಾ ಸೇವಾ ಸಮಾಜ, ವೀರಶೈವ ಲಿಂಗಾಯತ ಮಹಿಳಾ ಸಮಾಜ, ನ್ಯೂಟೌನ್‌ ಚುಂಚಾದ್ರಿ ಮಹಿಳಾ ವೇದಿಕೆ, ವಾಸವಿ ಮಹಿಳಾ ಮಂಡಳಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕ, ವಿಶ್ವ ಹಿಂದೂ ಪರಿಷತ್‌ ಮಾತೃಮಂಡಳಿ, ಸಿದ್ಧಾರೂಢನಗರದ ಶಾಶ್ವತಿ ಮಹಿಳಾ ಸಮಾಜ, ಪಂತಜಲಿ ಯೋಗ ಸಮಿತಿ, ದೈವಜ್ಞ ಮಹಿಳಾ ಸಮಾಜ ಸೇರಿದಂತೆ ಇನ್ನಿತರ ಮಹಿಳಾ ಸಂಘಟನೆಗಳು ಪಾಲ್ಗೊಂಡಿದ್ದವು.
    ಪ್ರಮುಖರಾದ ಶೋಭಾ ಗಂಗಾರಾಜ್‌, ಜಯಂತಿ ನಾಗರಾಜ್‌, ಅನ್ನಪೂರ್ಣ ಸತೀಶ್‌, ಯಶೋಧ ವೀರಭದ್ರಪ್ಪ, ಲತಾ ಪ್ರಭಾಕರ್‌, ಅನುಸೂಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ರಂಗಪ್ಪ ವೃತ್ತದಿಂದ ತಾಲೂಕು ಕಛೇರಿವರೆಗೂ ಜಾಗೃತ ಫಲಕಗಳನ್ನು ಹಿಡಿದು ಮೆರವಣಿಗೆ ನಡೆಸಲಾಯಿತು.

No comments:

Post a Comment