Saturday, August 19, 2023

ವೇದಾವತಿ ನಿಧನ

ವೇದಾವತಿ
    ಭದ್ರಾವತಿ, ಆ. ೧೯: ಹಳೇನಗರದ ಭೂತನಗುಡಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪದ ನಿವಾಸಿ ವೇದಾವತಿ(೯೨) ನಿಧನ ಹೊಂದಿದರು.
    ಜನ್ನಾಪುರ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುರೇಶ್‌ಕುಮಾರ್ ಸೇರಿದಂತೆ ೪ ಜನ ಪುತ್ರರು ಹಾಗು ಓರ್ವ ಪುತ್ರಿ ಇದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂರುದ್ರ ಭೂಮಿಯಲ್ಲಿ ನೆರವೇರಿತು.
    ಕಾರುಣ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜಿ. ರಾಜು ಹಾಗು ಪದಾಧಿಕಾರಿಗಳು, ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, ಉದ್ಯಮಿಗಳಾದ ಬಿ.ಕೆ ಜಗನ್ನಾಥ್, ಬಿ.ಕೆ ಶಿವಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

No comments:

Post a Comment