Tuesday, August 22, 2023

ಆ.೨೯ರಂದು ಶ್ರೀಕೃಷ್ಣ ವೇಷ ಪ್ರದರ್ಶನ

    ಭದ್ರಾವತಿ, ಆ. ೨೨ : ತರುಣಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ವೇಷ ಪ್ರದರ್ಶನ ಆ.೨೯ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ.
    ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಪ್ರದರ್ಶನ ಮಧ್ಯಾಹ್ನ ೧.೩೦ಕ್ಕೆ ನಡೆಯಲಿದ್ದು, ಪ್ರದರ್ಶನದಲ್ಲಿ ೫ ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ. ಪ್ರದರ್ಶನದಲ್ಲಿ ಪಾಲ್ಗೊಳ್ಳುವ ಎಲ್ಲಾ ಮಕ್ಕಳಿಗೂ ಬಹುಮಾನ ಹಾಗು ಸಿಹಿ ವಿತರಿಸಲಾಗುವುದು ಎಂದು ತರುಣಭಾರತಿ ಶಿಶುಮಂದಿರದ ಸಂಚಾಲಕಿ ಸರ್ವಮಂಗಳ ತಿಳಿಸಿದ್ದಾರೆ.

No comments:

Post a Comment