ಭದ್ರಾವತಿ, ಆ. ೨೩ : ತಾಲೂಕಿನ ಗೋಣಿಬೀಡು ಮಲ್ಲಿಗೇನಹಳ್ಳಿ ಶ್ರೀ ನವನಾಗ ಬ್ರಹ್ಮ ದತ್ತ ಕ್ಷೇತ್ರ ಸೇವಾ ಟ್ರಸ್ಟ್ ವತಿಯಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಹಾಗು ಶಂಕರ್ ಕಣ್ಣಿನ ಆಸ್ಪತ್ರೆ ಮತ್ತು ಬಿಆರ್ಪಿ ಸಂಯುಕ್ತ ಆಸ್ಪತ್ರೆ ಸಹಯೋಗದೊಂದಿಗೆ ಆ. ೨೪ರ ಗುರುವಾರ ಬೃಹತ್ ರಕ್ತದಾನ ಮತ್ತು ಆರೋಗ್ಯ ಹಾಗು ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಚಿಕ್ಕಮಗಳೂರು ಗೌರಿಗದ್ದೆ ದತ್ತಾಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಬಿ.ಆರ್.ಪಿ ಬಸ್ ನಿಲ್ದಾಣ ಮುಂಭಾಗ ಒಕ್ಕಲಿಗರ ಸಂಘದಲ್ಲಿ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ: ೯೯೦೬೧೮೧೦೬೬ ಅಥವಾ ೯೪೪೯೫೩೩೯೬೧ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಸಾರ್ವಜನಿಕರ ಶಿಬಿರದ ಸದುಯಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
No comments:
Post a Comment