ಭದ್ರಾವತಿ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಭಾಗ್ಯಮ್ಮ ಮತ್ತು ಉಪಾಧ್ಯಕ್ಷರಾಗಿ ಸೂರ್ಯನಾಯ್ಕ ಆಯ್ಕೆಯಾಗಿದ್ದಾರೆ.
ಭದ್ರಾವತಿ, ಆ. ೧೩: ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಭಾಗ್ಯಮ್ಮ ಮತ್ತು ಉಪಾಧ್ಯಕ್ಷರಾಗಿ ಸೂರ್ಯನಾಯ್ಕ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿಯಲ್ಲಿ ಹಿಂದುಳಿದ ವರ್ಗ(ಎ) ಮಹಿಳೆ ಮೀಸಲಾತಿ ಹೊಂದಿರುವ ಅಧ್ಯಕ್ಷ ಸ್ಥಾನಕ್ಕೆ ಭಾಗ್ಯಮ್ಮ ಹಾಗು ಸಾಮಾನ್ಯ ಮೀಸಲಾತಿ ಹೊಂದಿರುವ ಉಪಾಧ್ಯಕ್ಷ ಸ್ಥಾನಕ್ಕೆ ಸೂರ್ಯನಾಯ್ಕ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್, ಗೋಕುಲ್ ಕೃಷ್ಣ, ನಕುಲ್ ಹಾಗು ಗ್ರಾಮದ ಮುಖಂಡರು ಮತ್ತು ಪಂಚಾಯಿತಿ ಸದಸ್ಯರು ಅಭಿನಂದಿಸಿದ್ದಾರೆ.
No comments:
Post a Comment