ಭಾರತೀಯ ವೈದ್ಯಕೀಯ ಸಂಘದ ಭದ್ರಾವತಿ ತಾಲೂಕು ಶಾಖೆವತಿಯಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಅ. ೨೩: ಭಾರತೀಯ ವೈದ್ಯಕೀಯ ಸಂಘದ ತಾಲೂಕು ಶಾಖೆವತಿಯಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ನಗರದಲ್ಲಿ sಸುಮಾರು ೫೦ ವರ್ಷಗಳಿಗೂ ಹೆಚ್ಚು ಕಾಲದಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರ ಸೇವೆಯನ್ನು ಶ್ಲಾಘಿಸುವ ಜೊತೆಗೆ ಇಂದಿನ ಯುವ ವೈದ್ಯರಿಗೆ ಮಾದರಿಯಾಗುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಐಎಂಎ ತಾಲೂಕು ಶಾಖೆಯಿಂದ ಕೋರಲಾಯಿತು.
ಹಿರಿಯ ವೈದ್ಯರಾದ ಡಾ. ಪದ್ಮಾವತಿ, ಡಾ. ರಾಜಣ್ಣ, ಡಾ.ಆರ್.ಆರ್ ಶೆಟ್ಟಿ, ಡಾ. ಕೃಷ್ಣ ಎಸ್ ಭಟ್, ಡಾ.ಎಂ. ರವೀಂದ್ರನಾಥ್ ಕೋಠಿ, ಮೆಗ್ಗಾನ್ ಆಸ್ಪತ್ರೆ ನಿವೃತ್ತ ಜಿಲ್ಲಾ ಸರ್ಜನ್ ಡಾ. ನಂದಾ ಆರ್. ಕೋಠಿ, ಹಾಗು ಡಾ. ಹಂಚಾಟೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಚಿಕ್ಕಮಗಳೂರು ಗೌರಿಗದ್ದೆ ದತ್ತಾಶ್ರಮದ ಅವಧೂತ ಶ್ರೀ ವಿನಯ್ ಗುರುಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ವೈದ್ಯಕೀಯ ಸಂಘದ ಪದಾಧಿಕಾರಿಗಳಾದ ಡಾ. ವಿದ್ಯಾ, ಡಾ. ವೀಣಾ ಭಟ್, ಡಾ. ಸುನಿತಾ ಭಟ್, ಡಾ.ಪ್ರಶಾಂತ ಭಟ್, ,. ಡಾ.ಅರುಣ್ ಶೆಟ್ಟಿ ರವರುಗಳು ಉಪಸ್ಥಿತರಿದ್ದರು.
No comments:
Post a Comment