Wednesday, August 30, 2023

ವಿಐಎಸ್‌ಎಲ್‌ ನಿವೃತ್ತ ಉದ್ಯೋಗಿ ಮಂಜುನಾಥ್‌ ಯಲ್ಲೋಜಿ ನಿಧನ

ಮಂಜುನಾಥ್‌ ಯಲ್ಲೋಜಿ
    ಭದ್ರಾವತಿ, ಆ. ೩೦: ವಿಐಎಸ್‌ಎಲ್‌ ಕಾರ್ಖಾನೆ ನಿವೃತ್ತ ಉದ್ಯೋಗಿ, ಕಬಡ್ಡಿ ಕ್ರೀಡಾ ತರಬೇತಿದಾರ ಮಂಜುನಾಥ್‌ ಯಲ್ಲೋಜಿ(೬೬) ಮಂಗಳವಾರ ರಾತ್ರಿ ನಿಧನ ಹೊಂದಿದರು.
    ಇಬ್ಬರು ಗಂಡು ಇದ್ದಾರೆ. ವಿಐಎಸ್‌ಎಲ್‌ ಅತಿಥಿ ಗೃಹದಲ್ಲಿ ಪ್ರಭಾರ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮಂಜುನಾಥ್‌ರವರು ಮೂಲತಃ ಕಬಡ್ಡಿ ಕ್ರೀಡಾಪಟು ಆಗಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಅಲ್ಲದೆ ತರಬೇತಿದಾರರಾಗಿ  ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶಕರಾಗಿದ್ದರು.
    ಇವರ ನಿಧನಕ್ಕೆ ವಿಐಎಸ್‌ಎಲ್‌ ಕಾರ್ಖಾನೆ  ಕಾರ್ಯಪಾಲಕ ನಿರ್ದೇಶಕ ಬಿ.ಎಲ್‌ ಚಂದ್ವಾನಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್.‌ ಪ್ರವೀಣ್‌ಕುಮಾರ್‌, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್‌,  ಅಧಿಕಾರಿಗಳು, ಕಾರ್ಮಿಕರು ಹಾಗು ಗುತ್ತಿಗೆ ಕಾರ್ಮಿಕರು ಮತ್ತು ನಿವೃತ್ತ ಕಾರ್ಮಿಕರು, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

No comments:

Post a Comment