ಗುರುವಾರ, ಆಗಸ್ಟ್ 24, 2023

ಚಂದ್ರಯಾನ-೩ ಯಶಸ್ವಿ : ಬಿಜೆಪಿ ಸಂಭ್ರಮಾಚರಣೆ

ಚಂದ್ರಯಾನ -3  ಯಶಸ್ವಿಯಾದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷ ಭದ್ರಾವತಿ ತಾಲೂಕು ಮಂಡಲ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.
ಭದ್ರಾವತಿ, ಆ. ೨೪ :  ಚಂದ್ರಯಾನ -3  ಯಶಸ್ವಿಯಾದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.
  ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಗರದ ರಂಗಪ್ಪವೃತ್ತದಿಂದ ತಿರಂಗಾ ಯಾತ್ರೆ ಮೂಲಕ ಅಂಬೇಡ್ಕರ್ ವೃತ್ತದ ವರೆಗೆ ಪಕ್ಷದ ಕಾರ್ಯಕರ್ತರು ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೇಶದ ಹೆಮ್ಮೆಯ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಪ್ರಶಂಸಿಸಿದರು.
    ಚಂದಿರನ ದಕ್ಷಿಣ ಧ್ರುವದ ಮಾಹಿತಿಗಾಗಿ ಪ್ರಪಂಚದ ಎಲ್ಲಾ ದೇಶಗಳು ಭಾರತವನ್ನೇ ಅವಲಂಬನೆ ಯಾಗುವ ರೀತಿ ಸಾಧನೆಗೈದ ನಮ್ಮ ವಿಜ್ಞಾನಿಗಳ ಕಾರ್ಯ ಅಭಿನಂದನಾರ್ಹ ಎಂದರು.  ಸಿಹಿ ಹಂಚಲಾಯಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ