Monday, September 25, 2023

ಅ.15ರಂದು ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘಕ್ಕೆ ಚುನಾವಣೆ


    ಭದ್ರಾವತಿ : ನಗರದ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ಚುನಾವಣೆ ಅ.15ರಂದು ನಡೆಯಲಿದ್ದು, ಅ.4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

    ಸಂಘದ ಕಾರ್ಯಕಾರಿ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ಚುನಾವಣೆ ನಡೆಯುತ್ತಿದ್ದು, ಎಂ.ಸಿ ಮಂಜುನಾಥ್ ಅವರನ್ನು ಚುನಾವಣಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ. ಈಗಾಗಲೇ ಈ ಕುರಿತು ಸಂಘದ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಅ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 6ರಂದು ನಾಮಪತ್ರ ಹಿಂಪಡೆಯ ಬಹುದಾಗಿದೆ.ಅ.15ರಂದು ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ.

No comments:

Post a Comment