ಭದ್ರಾವತಿ : ನಗರಸಭೆ ವತಿಯಿಂದ ಈ ಬಾರಿ ಪೌರಕಾರ್ಮಿಕರ ದಿನಾಚರಣೆ ಸೆ.30ರಂದು ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟದಲ್ಲಿ ಹಮ್ಮಿಕೊಳ್ಳಲಾಗಿದ್ದು, ಪೌರಕಾರ್ಮಿಕರಿಗೆ ರಜೆ ಘೋಷಿಸಲಾಗಿದೆ.
ಪೌರಕಾರ್ಮಿಕರ ದಿನಾಚರಣೆಗೆ ಸರ್ಕಾರ ರಜೆ ಘೋಷಿಸಿದ್ದು, ಪೌರಕಾರ್ಮಿಕರು ಸ್ವಚ್ಛತಾ ಕಾರ್ಯಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಮನವಿ ಮಾಡಿದ್ದಾರೆ.
No comments:
Post a Comment