ಭದ್ರಾವತಿ ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ 34ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆ ಕಾಗದನಗರದ ಚಂದ್ರಾಲಯದಲ್ಲಿ ಸೋಮವಾರ ನಡೆಯಿತು.
ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ 34ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆ ಕಾಗದನಗರದ ಚಂದ್ರಾಲಯದಲ್ಲಿ ಸೋಮವಾರ ನಡೆಯಿತು.
ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ ಸಭೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ವಾರ್ಷಿಕ ವರದಿ, ಲೆಕ್ಕಪತ್ರ ಮಂಡನೆ ಹಾಗೂ ನಿಧನರಾದ ಸದಸ್ಯರಿಗೆ ಶ್ರದ್ಧಾಂಜಲಿ ಮತ್ತು ಆಯವ್ಯಯ ಮಂಡನೆ ನಡೆಯಿತು. ಅಲ್ಲದೆ ಸದಸ್ಯರಲ್ಲದವರಿಗೆ ನೀಡಿರುವ 74 ನಿವೇಶನಗಳ ಮುಟ್ಟುಗೋಲು ವಿಚಾರಕ್ಕೆ ಸಂಬಂಧಿಸಿದಂತೆ ಉಪಸಮಿತಿ ನೇಮಕಗೊಳಿಸಲು ಅನುಮೋದನೆ ಪಡೆಯಲಾಯಿತು.
ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗು ಕಾರ್ಯಕಾರಿ ಮಂಡಳಿ ನಿರ್ದೇಶಕರು ಉಪಸ್ಥಿತರಿದ್ದರು.
No comments:
Post a Comment