ಕಾರ್ಮಿಕ ವಲಯದಲ್ಲಿಯೇ ಅಸಮಾಧಾನ, ಸಂಭ್ರಮಾಚರಣೆ ಫಲ ನೀಡುವುದೇ?
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಸಂಭ್ರಮಾಚರಣೆ ಆಮಂತ್ರಣ ಪತ್ರ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ದೊಡ್ಡಣ್ಣ ಮತ್ತು ತಂಡದವರು ನೀಡಿ ಆಹ್ವಾನಿಸುತ್ತಿರುವುದು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಅರಗ ಜ್ಞಾನೇಂದ್ರ ಇತರರು ಉಪಸ್ಥಿತರಿದ್ದರು.
ಭದ್ರಾವತಿ : ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಹಾಗು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಸ್ಥಾಪನೆಗೊಂಡು ಶತಮಾನ ಪೂರೈಸಿರುವ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇದೀಗ ಸಂಕಷ್ಟದಲ್ಲಿ ಮುನ್ನಡೆಯುತ್ತಿದ್ದು, ಸಂಪೂರ್ಣವಾಗಿ ಮುಚ್ಚುವ ಭೀತಿ ಎದುರಾಗಿದೆ. ಈ ನಡುವೆ ಇದೀಗ ಕಾರ್ಖಾನೆ ಶತಮಾನೋತ್ಸವ ಸಂಭ್ರಮಾಚರಣೆ ನಡೆಯಲಿದ್ದು, ಇದಕ್ಕೆ ಕಾರ್ಮಿಕ ವಲಯದಲ್ಲಿಯೇ ಅಸಮಾಧಾನ ವ್ಯಕ್ತವಾಗುತ್ತಿದೆ.
ಮೈಸೂರು ಮಹಾರಾಜರ ವಂಶಸ್ಥರ 4 ನಾಲ್ಕು ತಲೆಮಾರುಗಳ ಪರಂಪರೆಯೊಂದಿಗೆ ಸಂಬಂಧ ಹೊಂದಿರುವ ಕಾರ್ಖಾನೆಯ ಶತಮಾನೋತ್ಸವ ಸಂಭ್ರಮಾಚರಣೆ ಜಾತ್ರೆ ರೂಪದಲ್ಲಿ ನಡೆಯಲಿದ್ದು, ಮೈಸೂರು ಮಹಾರಾಜ ಶ್ರೀ ಯದುವೀರ್ ಒಡೆಯರ್ ಅವರು ನ.4ರಂದು ಉದ್ಘಾಟಿಸಲಿದ್ದಾರೆ. ಎರಡು ದಿನ ಸಂಭ್ರಮಾಚರಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು, ರಾಜ್ಯದ ಸಂಸದರು, ಶಾಸಕರು, ರಾಜ್ಯದ ವಿವಿಧ ಮಠಗಳ ಮಠಾಧೀಶರು, ಹೋರಾಟದ ಹಿರಿಯ ಮುತ್ಸದ್ದಿಗಳು, ಚಲನಚಿತ್ರ ನಟರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಬಹುತೇಕ ಆಮಂತ್ರಣ ಪತ್ರ ವಿತರಿಸಲಾಗಿದ್ದು, ದೊಡ್ಡಣ ಅವರೇ ಖುದ್ದಾಗಿ ತೆರಳಿ ಆಮಂತ್ರಣ ವಿತರಿಸುತ್ತಿರುವುದು ವಿಶೇಷತೆಯಾಗಿದೆ.
ಸಂಭ್ರಮಾಚರಣೆ ಫಲ ನೀಡುವುದೇ ?:
ಹೋರಾಟ ಇಂದಿಗೂ ಮುನ್ನಡೆಯುತ್ತಿದ್ದು, ಬಹುತೇಕ ಗುತ್ತಿಗೆ ಕಾರ್ಮಿಕರು ಕೆಲಸವಿಲ್ಲದೆ ಬೀದಿಪಾಲಾಗಿದ್ದಾರೆ. ಇನ್ನೂ ಕೆಲವು ಕಾರ್ಮಿಕರು ಅತಿ ಕಡಿಮೆ ಸಂಬಳದಲ್ಲಿ ದುಡಿಯುತ್ತಿದ್ದು, ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಕಾರ್ಖಾನೆ ವಲಯದಲ್ಲಿ ಸಂಭ್ರಮ ಮರೆಯಾಗಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಜಾತ್ರೆ ರೂಪದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆ ನಡೆಸುತ್ತಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ನಿರಂತರ ಹೋರಾಟದಿಂದ ಸಾಧ್ಯವಾಗದ್ದು, ಸಂಭ್ರಮಾಚರಣೆಯಿಂದ ಸಾಧ್ಯವೇ? ಎಂಬ ಪ್ರಶ್ನೆ ಇದೀಗ ಕಾರ್ಮಿಕರಲ್ಲಿ ಕೇಳಿ ಬರುತ್ತಿದೆ.
ಹಾಗಾದರೆ ಎಂಪಿ ರಾಘವೇಂದ್ರ ಕಾರ್ಖಾನೆ ಪುನಃ ಆರಂಭಿಸುವ ಸುದ್ದಿ ಹೇಳಿದ್ದು ನಿಜ ಅಲ್ಲವಾ ?
ReplyDelete