ಭದ್ರಾವತಿಯಲ್ಲಿ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ದಿವಂಗತ ಶಂಕರ್ ನಾಗ್ ಸಂಸ್ಮರಣೆ ಕಾರ್ಯಕ್ರಮದಡಿ ಆಯೋಜಿಸಲಾಗಿರುವ ಕರ್ನಾಟಕ ಸ್ಟಾರ್ ಸಿಂಗರ್-2023 ಸೀಸನ್-1 ರಾಜ್ಯಮಟ್ಟದ ಚಲನಚಿತ್ರ ಗೀತೆ ಗಾಯನ ಸ್ಪರ್ಧೆಯ ಅಂತಿಮ ಸುತ್ತಿನ ಕಾರ್ಯಕ್ರಮ ಕುರಿತು ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಮಾಹಿತಿ ನೀಡಿದರು.
ಭದ್ರಾವತಿ: ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ದಿವಂಗತ ಶಂಕರ್ ನಾಗ್ ಸಂಸ್ಮರಣೆ ಕಾರ್ಯಕ್ರಮದಡಿ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಸೆ.6ರಂದು ಸಂಜೆ 4.30ಕ್ಕೆ ಆಯೋಜಿಸಲಾಗಿರುವ ಕರ್ನಾಟಕ ಸ್ಟಾರ್ ಸಿಂಗರ್-2023 ಸೀಸನ್-1 ರಾಜ್ಯಮಟ್ಟದ ಚಲನಚಿತ್ರ ಗೀತೆ ಗಾಯನ ಸ್ಪರ್ಧೆಯಲ್ಲಿ ಅಂತಿಮವಾಗಿ ಕರ್ನಾಟಕ ಸ್ಟಾರ್ ಸಿಂಗರ್ ಘೋಷಣೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದರು.
ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆ.24ರಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು 80 ಸ್ಫರ್ಧಿಗಳು ಭಾಗವಹಿಸಿದ್ದರು. ಈ ಪೈಕಿ 40 ಸ್ಪರ್ಧಿಗಳು ಆಯ್ಕೆಯಾಗಿದ್ದರು. 30ರಂದು ನಡೆದ ಮೊದಲ ಸುತ್ತಿನ ಸ್ಪರ್ಧೆಯಲ್ಲಿ 16ಸ್ಪರ್ಧಿಗಳು ಅಂತಿಮ ಸುತ್ತಿನ ಪ್ರವೇಶ ಪಡೆದಿದ್ದಾರೆ ಎಂದರು.
ಸೆ.6ರಂದು ನಡೆಯಲಿರುವ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಕರ್ನಾಟಕ ಸ್ಟಾರ್ ಸಿಂಗರ್ ಘೋಷಣೆ ನಡೆಯಲಿದೆ. ಪ್ರಥಮ 25 ಸಾವಿರ ರು. ನಗದು ಮತ್ತು ಪಾರಿತೋಷಕ, ದ್ವಿತೀಯ 15 ಸಾವಿರ ರು. ನಗದು ಮತ್ತು ಪಾರಿತೋಷಕ, ತೃತೀಯ 10 ಸಾವಿರ ರು. ನಗದು ಮತ್ತು ಪಾರಿತೋಷಕ ಹಾಗು ಸಮಾಧಾನಕರ 2 ಸಾವಿರ ರು. ನಗದು ಬಹುಮಾನ ನೀಡಲಾಗುವುದು, ಈ ಸ್ಪರ್ಧೆಯಲ್ಲಿ ನಾಡಿನ ಪ್ರಸಿದ್ದ ಕಲಾವಿದರು ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ ಎಂದರು.
ಇದೆ ಸಂದರ್ಭದಲ್ಲಿ ನಿರ್ದೇಶಕ ಹರ್ಷಪ್ರಿಯ ನಿರ್ದೇಶನದ ಹೆಜ್ಜಾರು ಚಲನಚಿತ್ರದ ಟ್ರೈಲರ್ ಹಾಗು ಒಂದು ಗೀತೆಯನ್ನು ಬಿಡುಗಡೆಗೊಳಿಸಲಾಗುವುದು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಲಾವಿದರ ಪ್ರತಿಭಾವಂತೆ ಮಕ್ಕಳನ್ನು ಸನ್ಮಾನಿಸಲಾಗುವುದು. ಅಲ್ಲದೆ ಹಿರಿಯ ಕಲಾವಿದರಿಗೆ ಜಯಶೀಲನ್ ಪ್ರಶಸ್ತಿ ಹಾಗು ಗೀತಾಂಜಲಿ ಶ್ರೀನಿವಾಸ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ಗೌರವ ಸಲಹೆಗಾರ ಬಿ.ಆರ್.ವಿಕ್ರಂ, ಉಪಾಧ್ಯಕ್ಷ ಅಂತೋಣಿ ಮಾರ್ಟಿನ್, ಪ್ರಧಾನ ಕಾರ್ಯದರ್ಶಿ ಬಿ.ಚಿದಾನಂದ, ಸಹಕಾರ್ಯದರ್ಶಿಗಳಾದ ಚರಣ್ ಕವಾಡ್, ಬಿ.ಎ ವಸಂತಕುಮಾರ್, ಖಜಾಂಚಿ ಪ್ರಶಾಂತ್, ವೈ.ಕೆ.ಹನುಮಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment