ಡಿ. ಜಯಶ್ರೀ
ಭದ್ರಾವತಿ : ಜೇಡಿಕಟ್ಟೆ ಹೊಸೂರು ನಿವಾಸಿ ಡಿ. ಜಯಶ್ರೀ(42) ಅನಾರೋಗ್ಯದಿಂದ ಶನಿವಾರ ನಿಧನ ಹೊಂದಿದರು.
ಶ್ರೀ ಮರುಳ ಸಿದ್ದೇಶ್ವರ ಜನ ಕಲ್ಯಾಣ ಧಾರ್ಮಿಕ ಟ್ರಸ್ಟ್ ಸದಸ್ಯ, ಪತಿ ಎಲ್. ದೇವರಾಜ್ ಹಾಗು ಇಬ್ಬರು ಗಂಡು ಮಕ್ಕಳು ಇದ್ದರು. ಇವರ ಅಂತ್ಯಕ್ರಿಯೆ ಭಾನುವಾರ ಜೇಡಿಕಟ್ಟೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ನಗರಸಭೆ ಸದಸ್ಯೆ ರೇಖಾ ಪ್ರಕಾಶ್, ಶ್ರೀ ಮರುಳ ಸಿದ್ದೇಶ್ವರ ಜನ ಕಲ್ಯಾಣ ಧಾರ್ಮಿಕ ಟ್ರಸ್ಟ್ ಪ್ರಮುಖರಾದ ಸಿದ್ದಲಿಂಗಯ್ಯ, ಎಸ್. ವಾಗೀಶ್, ಪ್ರಕಾಶ್, ರಾಮಲಿಂಗಣ್ಣ, ಹೋಟೆಲ್ ಶಿವಣ್ಣ, ಜವರೇಲಿಂಗೇಗೌಡ್ರು, ನಂಜಪ್ಪ, ಶಾರದಾಬಾಯಿ ಸೇರಿದಂತೆ ಗ್ರಾಮಸ್ಥರು ಜಯಶ್ರೀ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
No comments:
Post a Comment