ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಸಾವನ್ನಪ್ಪಿರುವ ಘಟನೆ ಭದ್ರಾವತಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಭದ್ರಾವತಿ: ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಮಾಚೇನಹಳ್ಳಿ ಮೆಸ್ಕಾಂ ಘಟಕ –5ರ ಕಿರಣ್ (25) ಮೃತಪಟ್ಟ ಲೈನ್ ಮ್ಯಾನ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು, ರಾಣೆಬೆನ್ನೂರು ಮೂಲದ ಸುನೀಲ್ (26) ಎಂಬುವರು ಗಾಯಗೊಂಡಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಿಬ್ಬರು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಮೊದಲನೇ ಕ್ರಾಸ್ ನಲ್ಲಿ ಭಾನುವಾರ ಬೆಳಗ್ಗೆ ನಿರ್ವಹಣೆ ಸಂಬಂಧ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. 10.30ರ ವೇಳೆಗೆ ಕಂಬದಲ್ಲಿ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು ಕಿರಣ್ ಮೃತಪಟ್ಟಿದ್ದು, ಸುನಿಲ್ ಗಾಯಗೊಂಡು ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
No comments:
Post a Comment