Wednesday, September 27, 2023

ಜ್ಞಾನದೀಪಿಕಾ ಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಭದ್ರಾವತಿ ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಭದ್ರಾವತಿ : ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ, ಸಿ. ಅರ್ಪಿತ 800 ಮೀಟರ್ ಓಟ, 1500 ಮೀಟರ್ ಓಟದಲ್ಲಿ ಪ್ರಥಮ ಹಾಗು ಸಿ. ಕಾವ್ಯಶ್ರೀ, ಟಿ.ಡಿ ದಿಶಾ, ಸಿ. ದುರ್ಗಾಶ್ರೀ ಮತ್ತು ಸಿ. ಅರ್ಪಿತ ಪ್ರಥಮ ಸ್ಥಾನ ಮತ್ತು 100 ಮೀಟರ್ ಓಟದಲ್ಲಿ ಸಿ. ಕಾವ್ಯಶ್ರೀ ದ್ವಿತೀಯ ಹಾಗು 800 ಮೀಟರ್ ಓಟದಲ್ಲಿ ಟಿ.ಡಿ ದಿಶಾ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

    ವಿಜೇತ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಕಾರ್ಯದರ್ಶಿಗಳು ಹಾಗು ಮುಖ್ಯೋಪಾಧ್ಯಾಯರು, ಶಿಕ್ಷಕರು, ತರಬೇತಿದಾರರು ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

No comments:

Post a Comment