ಪ್ರವಾದಿ ಮಹಮದ್ ಫೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಅಂಗವಾಗಿ ಗುರುವಾರ ಭದ್ರಾವತಿ ತಾಲೂಕಿನ ಹೊಳೆನೇರಲಕೆರೆ ಅಲ್ ಖಸ್ವ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ : ಪ್ರವಾದಿ ಮಹಮದ್ ಫೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಅಂಗವಾಗಿ ಗುರುವಾರ ತಾಲೂಕಿನ ಹೊಳೆನೇರಲಕೆರೆ ಅಲ್ ಖಸ್ವ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಶಿವಮೊಗ್ಗ ಮಿಡ್ ಟೌನ್, ರೋಟರಿ ಚಾರಿಟಿ ಫೌಂಡೇಷನ್, ರೋಟರಿ ರಕ್ತ ಕೇಂದ್ರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಶಿಬಿರದಲ್ಲಿ 36 ಮಂದಿ ರಕ್ತದಾನ ಮಾಡಿದರು.
ಇತ್ತೀಚೆಗೆ ಟ್ರಸ್ಟ್ ಉದ್ಘಾಟನೆಗೊಂಡಿದ್ದು, ಸಮಾಜ ಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
No comments:
Post a Comment