Sunday, September 24, 2023

ವಿವಿಧೆಡೆ ವಿನಾಯಕ ಮೂರ್ತಿ ದರ್ಶನ ಪಡೆದ ಸಂಸದ ಬಿ.ವೈ ರಾಘವೇಂದ್ರ

ಭದ್ರಾವತಿ ನಗರಸಭೆ ವಾರ್ಡ್ ನಂ.27ರ ಆಂಜನೇಯ ಆಗ್ರಹಾರದ 2ನೇ ರಸ್ತೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ದರ್ಶನ ಪಡೆದ ಸಂಸದ ಬಿ.ವೈ ರಾಘವೇಂದ್ರ ಅವರು ದೀಪ ಬೆಳಗಿಸುವ ಮೂಲಕ ವಿನಾಯಕ ಸೇವಾ ಸಮಿತಿಯ ಮುಂದಿನ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿದರು.

    ಭದ್ರಾವತಿ : ಸಂಸದ ಬಿ.ವೈ ರಾಘವೇಂದ್ರ ಅವರು ಭಾನುವಾರ ಹೊಸಮನೆಯಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 51ನೇ ವರ್ಷದ ಶ್ರೀ ವಿನಾಯಕ ಮೂರ್ತಿ ಸೇರಿದಂತೆ ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ದರ್ಶನ ಪಡೆದರು.

    ನಗರಸಭೆ ವಾರ್ಡ್ ನಂ.27ರ ಆಂಜನೇಯ ಆಗ್ರಹಾರದ 2ನೇ ರಸ್ತೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ದರ್ಶನ ಪಡೆದ ಸಂಸದರು ದೀಪ ಬೆಳಗಿಸುವ ಮೂಲಕ ವಿನಾಯಕ ಸೇವಾ ಸಮಿತಿಯ ಮುಂದಿನ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಸಮಿತಿ ಪ್ರಮುಖರು ಹಾಗು ಸ್ಥಳೀಯರು ಸಂಸದರನ್ನು ಸನ್ಮಾನಿಸಿ ಗೌರವಿಸಿದರು.

    ನಂತರ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 51ನೇ ವರ್ಷದ ಶ್ರೀ ವಿನಾಯಕ ಮೂರ್ತಿ ದರ್ಶನ ಪಡೆದರು.

    ಬಿಜೆಪಿ ಪಕ್ಷದ ಯುವ ಮುಖಂಡರಾದ ಮಂಗೋಟೆ ರುದ್ರೇಶ್‌, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಭದ್ರಾವತಿ ನಗರಸಭೆ ವಾರ್ಡ್ ನಂ.27ರ ಆಂಜನೇಯ ಆಗ್ರಹಾರದ 2ನೇ ರಸ್ತೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ದರ್ಶನ ಪಡೆದ ಸಂಸದ ಬಿ.ವೈ ರಾಘವೇಂದ್ರ ಅವರು ದೀಪ ಬೆಳಗಿಸುವ ಮೂಲಕ ವಿನಾಯಕ ಸೇವಾ ಸಮಿತಿಯ ಮುಂದಿನ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಸಮಿತಿ ಪ್ರಮುಖರು ಹಾಗು ಸ್ಥಳೀಯರು ಸಂಸದರನ್ನು ಸನ್ಮಾನಿಸಿ ಗೌರವಿಸಿದರು.

No comments:

Post a Comment