Tuesday, September 26, 2023

ವಿಐಎಸ್ಎಲ್ ಕಾರ್ಖಾನೆಯಲ್ಲಿ ಬೋನಿಗೆ ಬಿದ್ದ ಚಿರತೆ ಮರಿ






ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಚಿರತೆ ಮರಿಯೊಂದು ಸಿಕ್ಕಿಬಿದ್ದಿರುವ ಘಟನೆ  ಬುಧವಾರ ನಡೆದಿದೆ.

ಕಾರ್ಖಾನೆಯಲ್ಲಿ ಕಳೆದ ಎರಡು ಮೂರು ತಿಂಗಳುಗಳಿಂದ ಚಿರತೆ ಕಾಣಿಸಿಕೊಂಡಿರುವುದಾಗಿ  ಆಡಳಿತ ಮಂಡಳಿ ಅಧಿಕಾರಿಗಳು ಮತ್ತು ಕಾರ್ಮಿಕರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿತ್ತು. ಅಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಖಾನೆಗೆ  ಭೇಟಿ ನೀಡಿ ಚಿರತೆ ಕಾಣಿಸಿಕೊಂಡಿರುವ ಸ್ಥಳ  ಪರಿಶೀಲನೆ ನಡೆಸಿದ್ದರು ದಲ್ಲಿ ಚಿರತೆ  ಇರುವುದು ಖಚಿತವಾದ ಹಿನ್ನೆಲೆಯಲ್ಲಿ ಬೋನ್ ಇಡಲಾಗಿತ್ತು. 

ಆದರೆ ಚಿರತೆ ಮಾತ್ರ ಪತ್ತೆಯಾಗಿರಲಿಲ್ಲ. ಇದೀಗ ಬುಧವಾರ ಬೆಳಗ್ಗೆ ಬೋನಿನಲ್ಲಿ ಚಿರತೆ ಸಿಕ್ಕಿಹಾಕಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್ ನಾಗರಾಜ್ ಹಾಗೂ ಕಾರ್ಖಾನೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳು ಆಗಮಿಸಿ ಚಿರತೆಗೆ ಮದ್ದು ಬರುವ ಚುಚ್ಚುಮದ್ದು ನೀಡಿದ್ದು, ಕೆ ಚಿರತೆಯನ್ನು ಅರಣ್ಯಕ್ಕೆ ಬಿಟ್ಟುಬಿಡಲು ಸಿದ್ಧತೆಗಳು ನಡೆದಿವೆ.  

ಕಳೆದ ಸುಮಾರು ಒಂದು ವರ್ಷದ ಹಿಂದೆ ಚಿರತೆಯೊಂದು ಕಾರ್ಖಾನೆಗಯ  ವಸತಿ ಗೃಹದಲ್ಲಿ  ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು 8 ಗಂಟೆಗಳ ಕಾಲ ಕಾರ್ಯಾಚರಣೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

No comments:

Post a Comment