Sunday, September 17, 2023

ಸೇವಾ ಪಾಕ್ಷಿಕ : ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ

 

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 73ನೇ ವರ್ಷದ ಜನ್ಮದಿನ ಸೇವಾ ಪಾಕ್ಷಿಕ ಪ್ರಯುಕ್ತ ಭದ್ರಾವತಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

    ಭದ್ರಾವತಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 73ನೇ ವರ್ಷದ ಜನ್ಮದಿನ ಸೇವಾ ಪಾಕ್ಷಿಕ ಪ್ರಯುಕ್ತ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

    ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶಿಬಿರ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಕ್ತದಾನ ಮಹಾದಾನವಾಗಿದ್ದು, ರಕ್ತದಾನ ದಾನ ಮಾಡುವ ಮೂಲಕ ಸೇವಾಕಾರ್ಯ ನಡೆಸಿದ ದಾನಿಗಳಿಗೆ ಅಭಿನಂದಿಸಿದರು.

    ಯುವ ಮೋರ್ಚಾ ಪ್ರಮುಖರಾದ ಗೋಕುಲ ಕೃಷ್ಣ, ಧನುಷ್ ಬೋಸ್ಲೆ, ಹೇಮಂತ್, ಪ್ರದೀಪ್ ಗೌಂಡರ್ ಹಾಗು ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

No comments:

Post a Comment