Sunday, October 1, 2023

ಈದ್ ಮಿಲಾದ್ : ರಕ್ತದಾನ ಶಿಬಿರ

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಭದ್ರಾವತಿಯಲ್ಲಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಭಾನುವಾರ ಹೊಳೆಹೊನ್ನೂರು ವೃತ್ತದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

    ಭದ್ರಾವತಿ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಗರದ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಭಾನುವಾರ ಹೊಳೆಹೊನ್ನೂರು ವೃತ್ತದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

    ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಬೋಧನಾ ಆಸ್ಪತ್ರೆ, ಸುಬ್ಬಯ್ಯ ಮೆಡಿಕಲ್ ಕಾಲೇಜ್ ರಕ್ತ ನಿಧಿ ಹಾಗು ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ನಡೆದ ಶಿಬಿರದಲ್ಲಿ ಹೆಚ್ಚಿನ ಜನರು ಪಾಲ್ಗೊಂಡಿದ್ದರು. ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಶಿಬಿರ ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ.

    ಟ್ರಸ್ಟ್ ಅಧ್ಯಕ್ಷ ಜೆಬಿಟಿ ಬಾಬು, ಪ್ರಮುಖರಾದ ಮುಸ್ವೀರ್ ಬಾಷಾ, ಮಾಜಿ ಉಪ ಮೇಯರ್ ಮಹಮದ್ ಸನ್ನಾವುಲ್ಲಾ, ನಗರಸಭೆ ಸದಸ್ಯ ಬಷೀರ್ ಅಹಮದ್ ಹಾಗು ಟ್ರಸ್ಟ್ ಪದಾಧಿಕಾರಿಗಳು, ಮುಸ್ಲಿಂ ಸಮಾಜದ ಮುಖಂಡರು, ಸುಬ್ಬಯ್ಯ ಮೆಡಿಕಲ್ ಕಾಲೇಜ್ ರಕ್ತ ನಿಧಿ ಹಾಗು ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

No comments:

Post a Comment