Sunday, October 1, 2023

ಈದ್ ಮಿಲಾದ್ ಸಂಭ್ರಮ : ಬೃಹತ್ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ

ಪ್ರತಿ ವರ್ಷದಂತೆ ಈ ಬಾರಿ ಸಹ ಪ್ರವಾದಿ ಮಹಮದ್ ಫೈಗಂಬರರ ಜನ್ಮದಿನ ಈದ್ ಮಿಲಾದ್ ಹಬ್ಬದ ಅಂಗವಾಗಿ ಭದ್ರಾವತಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.

    ಭದ್ರಾವತಿ: ಪ್ರತಿ ವರ್ಷದಂತೆ ಈ ಬಾರಿ ಸಹ ಪ್ರವಾದಿ ಮಹಮದ್ ಫೈಗಂಬರರ ಜನ್ಮದಿನ ಈದ್ ಮಿಲಾದ್ ಹಬ್ಬದ ಅಂಗವಾಗಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.

    ಸೆ.28ರಂದು ಈದ್ ಮಿಲಾದ್ ಹಬ್ಬ ಆಚರಣೆ ಸಾಂಕೇತಿಕವಾಗಿ ನಡೆದಿದ್ದು, ಭಾನುವಾರ ಮುಸ್ಲಿಂ ಸಮುದಾಯದವರು ಅಲಂಕೃತಗೊಂಡ ಪ್ರವಾದಿಯವರ ಜನ್ಮಸ್ಥಳ ಮೆಕ್ಕಾ ಮದೀನಾ ಗುಂಬಜ್ ಮಾದರಿಗಳೊಂದಿಗೆ ಬೃಹತ್ ಮೆರವಣೆಗೆ ನಡೆಸಿದರು.

    ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ನೇತೃತ್ವದಲ್ಲಿ ನಗರದ ಹೊಳೆಹೊನ್ನೂರು ವೃತ್ತದಿಂದ ಆರಂಭಗೊಂಡ ಮೆರವಣೆಗೆ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ ಮೂಲಕ ತರೀಕೆರೆ ರಸ್ತೆ ಮಹಾತ್ಮಗಾಂಧಿ ವೃತ್ತ ತಲುಪಿ ನಂತರ ಸಾದತ್ ದರ್ಗಾ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

    ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಮುರ್ತುಜಾ ಖಾನ್, ನಗರಸಭೆ ಅಧ್ಯಕ್ಷ ಶೃತಿ ವಸಂತಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಸದಸ್ಯರಾದ ಸದಸ್ಯರಾದ ಬಿ.ಕೆ.ಮೋಹನ್, ಚನ್ನಪ್ಪ, ಬಷೀರ್ ಅಹಮದ್, ಸೈಯದ್ ರಿಯಾಜ್, ಮಾಜಿ ಉಪ ಮೇಯರ್ ಮಹಮದ್ ಸನ್ನಾವುಲ್ಲಾ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಎಸ್. ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಸಿ.ಎಂ ಖಾದರ್, ದಿಲ್ದಾರ್, ಅಮೀರ್ ಜಾನ್ ಸೇರಿದಂತೆ ನೂರಾರು ಮಂದಿ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಪಾಲ್ಗೊಂಡಿದ್ದರು.

No comments:

Post a Comment