Tuesday, October 10, 2023

ನೌಕರನ ವೇತನಕ್ಕೆ ಸಂಬಂಧಿಸಿದ ನಿಖರ ಮಾಹಿತಿ ನೀಡದ ಅಧಿಕಾರಿಗೆ ೨೫ ಸಾವಿರ ರು. ದಂಡ

    ಭದ್ರಾವತಿ: ನೌಕರನ ವೇತನಕ್ಕೆ ಸಂಬಂಧಿಸಿದ ನಿಖರವಾದ ಮಾಹಿತಿ ನೀಡಲು ವಿಫಲರಾಗಿರುವ ಸಾರ್ವಜನಿಕ ಮಾಹಿತಿ ಅಧಿಕಾರಿಯೊಬ್ಬರಿಗೆ ಮಾಹಿತಿ ಆಯೋಗ ೨೫ ಸಾವಿರ ರು. ದಂಡ ವಿಧಿಸಿರುವ ಘಟನೆ ನಡೆದಿದೆ.
    ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ನೌಕರ ಟಿ.ಜಿ ಬಸವರಾಜಯ್ಯನವರು ೦೧.೦೧.೨೦೧೬ ರಿಂದ ನಿವೃತ್ತಿ ಹೊಂದಿದ ದಿನದವರೆಗೆ ಅಂದರೆ ೩೧.೦೫.೨೦೨೧ರವರೆಗೆ ನೀಡಿರುವ ವೇತನದ ಪ್ರತಿ ತಿಂಗಳ ಪೂರ್ಣ ವಿವರದ ಸಂಬಳದ ಚೀಟಿಯ ಧೃಢೀಕೃತ ಪ್ರತಿ ನೀಡಬೇಕೆಂದು ಕಾರ್ಖಾನೆಯ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿರುವ ಮುಖ್ಯ ಆಡಳಿತಾಧಿಕಾರಿ ಜಿ.ಎಸ್ ಶ್ರೀನಿವಾಸ್‌ರವರಿಗೆ ಅರ್ಜಿ ಸಲ್ಲಿಸಿದ್ದರು.
    ಶ್ರೀನಿವಾಸ್‌ರವರು ನಿಗದಿತ ಅವಧಿಯಲ್ಲಿ ನಿಖರವಾದ ಮಾಹಿತಿ ನೀಡುವಲ್ಲಿ ವಿಫಲರಾಗಿದ್ದು, ಈ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ಆಯೋಗ ಮಾಹಿತಿ ಹಕ್ಕು ಅಧಿನಿಯಮ ೨೦೦೫ರ ಕಲಂ ೨೦(೧) ಅನ್ವಯ ದಂಡ ವಿಧಿಸಿದೆ. ಈ ಕುರಿತು ರಾಜ್ಯ ಮಾಹಿತಿ ಆಯುಕ್ತ ಎಚ್.ಸಿ ಸತ್ಯನ್ ಮೇಲ್ಮನವಿದಾರ ಟಿ.ಜಿ ಬಸವರಾಜಯ್ಯ ಅವರಿಗೆ ನೀಡಿರುವ ಮಾಹಿತಿ ಪತ್ರದಲ್ಲಿ ತಿಳಿಸಿದ್ದಾರೆ.  

No comments:

Post a Comment