Friday, October 13, 2023

ಹಳೇನಗರ ಮಹಿಳಾ ಸೇವಾ ಸಮಾಜ ಮಾದರಿ ಸಂಘಟನೆ : ಎಚ್.ಎಂ ಮನುಕುಮಾರ್

ಭದ್ರಾವತಿ ಹಳೇನಗರ ಮಹಿಳಾ ಸೇವಾ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ, ಅರಕೆರೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಬಬಿತ ಕುಮಾರಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
    ಭದ್ರಾವತಿ: ಹಳೇನಗರದ ಮಹಿಳಾ ಸೇವಾ ಸಮಾಜ ಇತರೆ ಸಂಘಟನೆಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪೌರಾಯುಕ್ತ ಎಚ್.ಎಂ ಮನುಕುಮಾರ್ ಹೇಳಿದರು.
    ಅವರು ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಒಗ್ಗಟ್ಟಾಗಿ ಸಂಘಟನೆಯನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು.
    ಸಂಘದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ, ಅರಕೆರೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಬಬಿತ ಕುಮಾರಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಉಪಸ್ಥಿತರಿದ್ದರು.
    ಶಾರದ ಶ್ರೀನಿವಾಸ್ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಶೋಭಾಗಂಗರಾಜ್ ಸ್ವಾಗತಿಸಿದರು. ಕಮಲ ರಾಯ್ಕರ್ ನಿರೂಪಸಿ, ಖಜಾಂಚಿ ಶಾಂತಿ ನಾಗರಾಜ್ ಶೇಟ್ ವಂದಿಸಿದರು.

No comments:

Post a Comment