Sunday, October 8, 2023

ಶ್ರೀ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿ ಲಿ. ಯಕ್ಸಂಬಾ(ಮಲ್ಪಿ-ಸ್ಟೇಟ್) ೧೬೪ನೇ ಶಾಖೆ ಉದ್ಘಾಟನೆ


ಭದ್ರಾವತಿ ನಗರದಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿ ಲಿ. ಯಕ್ಸಂಬಾ(ಮಲ್ಪಿ-ಸ್ಟೇಟ್) ೧೬೪ನೇ ಶಾಖೆಯನ್ನು ಆನಂದಪುರ ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು.
    ಭದ್ರಾವತಿ: ನಗರದಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿ ಲಿ. ಯಕ್ಸಂಬಾ(ಮಲ್ಪಿ-ಸ್ಟೇಟ್) ೧೬೪ನೇ ಶಾಖೆಯನ್ನು ಆನಂದಪುರ ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು.
    ಸಂಸದ ಅಣ್ಣಾಸಾಹೇಬ್ ಶಂಕರ ಜೊಲ್ಲೆ ಸಂಸ್ಥಾಪಕ ಹಾಗು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಸಹ ಸಂಸ್ಥಾಪಕರಾಗಿರುವ ಶ್ರೀ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿ ವಿಸ್ತರಣೆಗೊಳ್ಳುತ್ತಿದ್ದು, ಪ್ರಸಕ್ತ ಸಾಲಿನ ಜುಲೈ ಅಂತ್ಯಕ್ಕೆ ಸುಮಾರು ೩.೫ ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದ್ದು, ಸುಮಾರು ೩೫ ಕೋ. ರು. ಲಾಭದಲ್ಲಿ ಮುನ್ನಡೆಯುತ್ತಿದೆ. ಇದೀಗ ನಗರದಲ್ಲಿ ನೂತನ ಶಾಖೆ ಆರಂಭಗೊಂಡಿದ್ದು, ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಶುಭ ಕೋರಿದರು.
    ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಸೊಸೈಟಿ ವ್ಯವಸ್ಥಾಪಕ ಸುರೇಶ್, ಎಸ್. ರಾಜಶೇಖರ್ ಉಪ್ಪಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment