ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ಭದ್ರಾವತಿ ನ್ಯೂಟೌನ್ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಹಾರ ಮೇಳ ಇಂಧನ ರಹಿತ ಅಡುಗೆ ತಯಾರಿಕೆ ಸ್ಪರ್ಧೆ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪ್ರಸೂತಿ ತಜ್ಞೆ ಡಾ. ವರ್ಷಾ ಉದ್ಘಾಟಿಸಿದರು.
ಭದ್ರಾವತಿ: ಮಹಿಳೆಯರು ಅಡುಗೆ ಮಾಡುವ ವಿಧಾನದಲ್ಲೂ ಸವಾಲು ಎದುರಿಸುವಂತಾಗಿದ್ದು, ಇಂಧನ ಬಳಸದೆ ಅಡುಗೆ ಮಾಡುವ ಕಲೆಯಲ್ಲೂ ಸಹ ಮಹಿಳೆಯರು ಮೈಗೂಡಿಸಿಕೊಳ್ಳಬೇಕೆಂದು ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪ್ರಸೂತಿ ತಜ್ಞೆ ಡಾ. ವರ್ಷಾ ಹೇಳಿದರು.
ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ನ್ಯೂಟೌನ್ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಹಾರ ಮೇಳ ಇಂಧನ ರಹಿತ ಅಡುಗೆ ತಯಾರಿಕೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ದಸರಾ ಹಬ್ಬ ಎಂದರೆ ಮಹಿಳೆಯರಿಗೆ ಸಂಭ್ರಮ. ಮನೆಯಲ್ಲಿ ಮಹಿಳೆಯರು ಖುಷಿಯಿಂದ ಇದ್ದಾಗ ಮಾತ್ರ ಕುಟುಂಬ ಸಹ ಸಂಭ್ರಮದಲ್ಲಿರುತ್ತದೆ. ಅಡುಗೆ ತಯಾರಿಕೆ ಸ್ಪರ್ಧೆ ಎಂದರೆ ಮಹಿಳೆಯರಿಗೆ ನೀಡಿರುವ ಪ್ರಮುಖ ಸಾಧ್ಯತೆ ಎಂಬುದಾಗಿದೆ. ಎಲ್ಲರೂ ಸ್ಪರ್ಧೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ಪ್ರೀತಿಯಿಂದ ಅಡುಗೆ ತಯಾರಿಕೆ ಮಾಡುವ ಮೂಲಕ ತಮ್ಮ ಪ್ರತಿಭೆಗಳನ್ನು ಹೊರಬೇಕೆಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಪೌರಾಯುಕ್ತ ಎಚ್.ಎಂ ಮನುಕುಮಾರ್, ಮೈಸೂರಿಗೂ ಭದ್ರಾವತಿ ನಗರಕ್ಕೂ ಬಿಡಿಸಲಾದ ನಂಟಿದೆ. ಮೈಸೂರು ದೊರೆಗಳ ಹಾಗು ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಕೊಡುಗೆ ಅನನ್ಯವಾಗಿದೆ. ಈ ನಿಟ್ಟಿನಲ್ಲಿ ಭದ್ರಾವತಿ, ಶಿವಮೊಗ್ಗ ಸೇರಿದಂತೆ ಇಡೀ ಜಿಲ್ಲೆಯಲ್ಲಿ ದಸರಾ ಹಬ್ಬಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಮ್ಮ ನಾಡಿನ ಪರಂಪರೆ, ಸಂಸ್ಕೃತಿ, ಕಲೆ, ಕ್ರೀಡೆ ಎಲ್ಲವನ್ನು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕರ್ತವ್ಯ ನಮ್ಮೆಲ್ಲದ್ದಾಗಿದೆ. ದಸರಾ ಎಲ್ಲರ ಹಬ್ಬವಾಗಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗಾಗಿ ಆಹಾರ ಮೇಳ ಆಯೋಜಿಸಲಾಗಿದೆ ಎಂದರು.
ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ಭದ್ರಾವತಿ ನ್ಯೂಟೌನ್ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಹಾರ ಮೇಳ ಇಂಧನ ರಹಿತ ಅಡುಗೆ ತಯಾರಿಕೆ ಸ್ಪರ್ಧೆಯಲ್ಲಿ ಸುಮಾರು 15 ಮಹಿಳಾ ತಂಡಗಳು ಭಾಗವಹಿಸಿದ್ದವು.
ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರಸಭಾ ಸದಸ್ಯರಾದ ಚನ್ನಪ್ಪ, ಸವಿತಾ ಉಮೇಶ್, ಮಣಿ ಎಎನ್ಎಸ್, ಕಾಂತರಾಜ್, ಮಂಜುಳ ಸುಬ್ಬಣ್ಣ, ಜಯಶೀಲ ಸುರೇಶ್, ಸವಿತಾ ಉಮೇಶ್, ಪಲ್ಲವಿ ದಿಲೀಪ್, ಲತಾ ಚಂದ್ರಶೇಖರ್, ಅನುಪಮಾ ಚನ್ನೇಶ್, ತೀರ್ಪುಗಾರರಾದ ವಿಕ್ರಂ ಶೆಟ್ಟಿ, ಗೀತಾ ಬೆಂಗಳೂರು ಮತ್ತು ವೀಣಾ ರಾಘವೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಕಾರ್ಯಕ್ರಮ ನಿರೂಪಿಸಿದರು. ಸುಮಿತ್ರ ಎಚ್. ಹರಪ್ಪನಹಳ್ಳಿ ವಂದಿಸಿದರು. ಸ್ಪರ್ಧೆಯಲ್ಲಿ ಸುಮಾರು 15 ಮಹಿಳಾ ತಂಡಗಳು ಭಾಗವಹಿಸಿದ್ದವು.
No comments:
Post a Comment