Tuesday, October 17, 2023

ಅ.೧೮ರಂದು ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣ


ಶ್ರೀ ವಿನಯ್ ಗುರೂಜಿ
    ಭದ್ರಾವತಿ: ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಅ.೧೮ರಂದು ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣ ಹಮ್ಮಿಕೊಳ್ಳಲಾಗಿದೆ.
    ನವರಾತ್ರಿ ಮಹೋತ್ಸವದ ಅಂಗವಾಗಿ ವಿನಯ್ ಗುರೂಜಿಯವರ ಭಕ್ತ ವೃಂದದಿಂದ ಹಮ್ಮಿಕೊಳ್ಳಲಾಗಿರುವ ೨ನೇ ವರ್ಷದ ಕಾರ್ಯಕ್ರಮ ಇದಾಗಿದ್ದು, ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

No comments:

Post a Comment