ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಿ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಬೇಕು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಂಚೆ ಪತ್ರಗಳ ಮೂಲಕ ರಕ್ತ ಚಳುವಳಿ ಅಭಿಯಾನ ನಡೆಸಲಾಯಿತು.
ಭದ್ರಾವತಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಿ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಂಚೆ ಪತ್ರಗಳ ಮೂಲಕ ರಕ್ತ ಚಳುವಳಿ ಅಭಿಯಾನ ನಡೆಸಲಾಯಿತು.
ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರ ಆದೇಶದಂತೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ಅಭಿಯಾನ ನಡೆಸಲಾಯಿತು. `ಕಾವೇರಿ ನಮ್ಮದು ರಕ್ತ ಕೊಟ್ಟೇವು ಕಾವೇರಿ ಬಿಡೇವು' ಎಂಬ ಘೋಷಣೆಗಳನ್ನು ಕೂಗುತ್ತಾ ಅಂಚೆ ಪತ್ರದಲ್ಲಿ `ಕಾವೇರಿ ನಮ್ಮದು' ಎಂದು ರಕ್ತದಲ್ಲಿ ಬರೆಯಲಾಯಿತು. ಅಂಚೆ ಪತ್ರಗಳನ್ನು ಅಂಚೆ ಪೆಟ್ಟಿಗೆಯಲ್ಲಿ ಹಾಕುವ ಮೂಲಕ ಪ್ರಧಾನ ಮಂತ್ರಿಯವರಿಗೆ ಕಳುಹಿಸಲಾಯಿತು.
ಅಭಿಯಾನದಲ್ಲಿ ವೇದಿಕೆ ಜಿಲ್ಲಾ ಕಾರ್ಯದರ್ಶಿ ಜಾಹ್ನವಿ, ಜಿಲ್ಲಾ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾದ ಚೇತನ ಶೆಟ್ಟಿ, ನಗರ ಅಧ್ಯಕ್ಷರಾದ ಗೀತಾ ಭುವನ, ನಾಗರತ್ನ, ರೂಪ, ನಯನ, ಉಷಾ ಸೇರಿದಂತೆ ಮಹಿಳಾ ಕರವೇ ಪದಾಧಿಕಾರಿಗಳು ಭಾಗವಹಿಸಿದ್ದರು.
No comments:
Post a Comment