ಭದ್ರಾವತಿ ವಿಐಎಸ್ಎಲ್ ಆಸತ್ರೆ, ನಾರಾಯಣ ಆಸ್ಪತ್ರೆ ಹಾಗೂ ಬೆಂಗಳೂರಿನ ಮಜುಂದಾರ್ ಷಾ ಕ್ಯಾನ್ಸರ್ ಸಂಸ್ಥೆ ಸಹಯೋಗದಲ್ಲಿ ನಗರದ ನ್ಯೂಟೌನ್ ವಿಐಎಸ್ಎಲ್ ಆಸ್ಪತ್ರೆಯಲ್ಲಿ ಮಹಿಳೆಯರಿಗಾಗಿ ಉಚಿತ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ: ವಿಐಎಸ್ಎಲ್ ಆಸತ್ರೆ, ನಾರಾಯಣ ಆಸ್ಪತ್ರೆ ಹಾಗೂ ಬೆಂಗಳೂರಿನ ಮಜುಂದಾರ್ ಷಾ ಕ್ಯಾನ್ಸರ್ ಸಂಸ್ಥೆ ಸಹಯೋಗದಲ್ಲಿ ನಗರದ ನ್ಯೂಟೌನ್ ವಿಐಎಸ್ಎಲ್ ಆಸ್ಪತ್ರೆಯಲ್ಲಿ ಮಹಿಳೆಯರಿಗಾಗಿ ಉಚಿತ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ವಿಐಎಸ್ಎಲ್ ಕಾರ್ಖಾನೆ ಹಣಕಾಸು ವಿಭಾಗದ ಪ್ರಧಾನ ವ್ಯವಸ್ಥಾಪಕಿ ಶೋಭಾ ಶಿವಶಂಕರನ್ ಶಿಬಿರ ಉದ್ಘಾಟಿಸಿದರು. ವಿಐಎಸ್ಎಲ್ ಆಸ್ಪತ್ರೆ ಮುಖ್ಯ ಸಲಹೆಗಾರರಾದ ಡಾ. ಎಚ್. ಶೋಭಾ(ಮೆಡಿಕಲ್), ಡಾ. ಟಿ.ಎನ್. ಸುಷ್ಮಾ(ಮೆಡಿಕಲ್) ಮತ್ತು ಸಹಾಯಕ ಪ್ರಬಂಧಕರಾದ ಕೆ.ಎಸ್. ಶೋಭಾ, (ಸಿಬ್ಬಂದಿ), ನಾರಾಯಣ ಆಸ್ಪತ್ರೆ ಡಾ. ಕೀರ್ತನ, ಮಾರುಕಟ್ಟೆ ಕಾರ್ಯನಿರ್ವಾಹಕ ಕೆ.ಸಿ. ಆಕಾಶ್, ಎಕ್ಸ್ ರೇ-ತಂತ್ರಜ್ಞರಾದ ನಿರ್ಮಲ ಮತ್ತು ಲಲಿತ ಕ್ಯಾನ್ಸರ್ ತಪಾಸಣಾ ತಂಡದ ನೇತೃತ್ವದ ವಹಿಸಿದ್ದರು. ವಿಐಎಸ್ಎಲ್ ಆಸ್ಪತ್ರೆ ವೈದ್ಯರಾದ ಡಾ. ಕೆ.ಎಸ್ ಸುಜೀತ್ ಕುಮಾರ್ ಮತ್ತು ಡಾ. ಎಸ್.ಎನ್ ಸುರೇಶ್ ಉಪಸ್ಥಿತರಿದ್ದರು.
No comments:
Post a Comment