ಶರನ್ನವರಾತ್ರಿ ಉತ್ಸವದ ಅಂಗವಾಗಿ ಭದ್ರಾವತಿ ಹುಡ್ಕೋ ಕಾಲೋನಿಯಲ್ಲಿರುವ ಸಿದ್ದಾರೂಢ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಳ್ಳೂರು ಸುಕ್ಷೇತ್ರದ ಶ್ರೀ ಶಿವಯೋಗಿಶ್ವರ ಸಂಸ್ಥಾನ ಮಠದ ಶ್ರೀ ಸದ್ಗುರು ಬಸವಾನಂದ ಭಾರತಿ ಸ್ವಾಮೀಜಿಯವರು ಪಾಲ್ಗೊಂಡು ಪ್ರವಚನ ನೀಡಿದರು.
ಭದ್ರಾವತಿ : ಶರನ್ನವರಾತ್ರಿ ಉತ್ಸವದ ಅಂಗವಾಗಿ ಹುಡ್ಕೋ ಕಾಲೋನಿಯಲ್ಲಿರುವ ಸಿದ್ದಾರೂಢ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಳ್ಳೂರು ಸುಕ್ಷೇತ್ರದ ಶ್ರೀ ಶಿವಯೋಗಿಶ್ವರ ಸಂಸ್ಥಾನ ಮಠದ ಶ್ರೀ ಸದ್ಗುರು ಬಸವಾನಂದ ಭಾರತಿ ಸ್ವಾಮೀಜಿಯವರು ಪಾಲ್ಗೊಂಡು ಪ್ರವಚನ ನೀಡಿದರು.
ಶ್ರೀಗಳು ಪ್ರತಿ ವರ್ಷ ಶರನ್ನವರಾತ್ರಿ ಉತ್ಸವದಂದು ಶ್ರೀ ಮಠಕ್ಕೆ ಆಗಮಿಸಿ ಭಕ್ತರಿಗೆ ಆಶೀರ್ವದಿಸುತ್ತಿದ್ದು, ೧೦ ದಿನಗಳ ಕಾಲ ನವದುರ್ಗೆಯರ ಆರಾಧನೆಯೊಂದಿಗೆ ಧಾರ್ಮಿಕ ಆಚರಣೆಗಳು ಜರುಗಿದವು. ಪ್ರತಿದಿನ ಭಕ್ತರಿಗೆ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡು ಉತ್ಸವ ಯಶಸ್ವಿಗೊಳಿಸಿದರು.
No comments:
Post a Comment