Tuesday, November 21, 2023

ನೇತ್ರಾವತಿ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ : ಕಾರ್ಮಿಕ ವಲಯದಲ್ಲಿ ಸಂತಸ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನೇತ್ರಾವತಿ ಹಾಗು ಇವರ ಬೆಂಬಲಿಗರು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
    ಭದ್ರಾವತಿ: ನಿರಂತರ ಹೋರಾಟದ ಮೂಲಕ ಗಮನ ಸೆಳೆದಿರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನೇತ್ರಾವತಿ ಹಾಗು ಇವರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಕ್ಕೆ ಇಲ್ಲಿನ ಕಾರ್ಮಿಕ ವಲಯದಲ್ಲಿ ಸಂತಸ ವ್ಯಕ್ತವಾಗಿದೆ.
    ಹಲವಾರು ವರ್ಷಗಳಿಂದ ಆಮ್ ಆದ್ಮಿ ಪಾರ್ಟಿ(ಎಎಪಿ) ಸಂಘಟಿಸುವ ಜೊತೆಗೆ ಹಲವಾರು ಹೋರಾಟಗಳ ಮೂಲಕ ನೇತ್ರಾವತಿಯವರು ಗುರುತಿಸಿಕೊಂಡಿದ್ದು, ಈ ಹಿಂದೆ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಶಿವಮೊಗ್ಗದಿಂದ ಕಾರ್ಖಾನೆ ಮುಖ್ಯದ್ವಾರದವರೆಗೂ ಪಾದಯಾತ್ರೆ ನಡೆಸಿ ಕಾರ್ಮಿಕರಿಗೆ ಬೆಂಬಲ ಸೂಚಿಸಿ ಕಾರ್ಖಾನೆ ಅಭಿವೃದ್ಧಿಗೊಳಿಸುವಂತೆ ಒತ್ತಾಯಿಸುವ ಮೂಲಕ ಗಮನ ಸೆಳೆದಿದ್ದರು. ಅವರು ಕಾರ್ಮಿಕರು ಹಾಗು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹೊಂದಿರುವ ಕಾಳಜಿಗೆ ವ್ಯಕ್ತವಾಗಿತ್ತು.
    ಕಳೆದ ಕೆಲವು ದಿನಗಳ ಹಿಂದೆ ನೇತ್ರಾವತಿ ಹಾಗು ಅವರ ಬೆಂಬಲಿಗರು  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಾರ್ಮಿಕ ಮುಖಂಡ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರ ಕಾರ್ಮಿಕ ಮುಖಂಡರು ಸಂತಸ ವ್ಯಕ್ತಪಡಿಸುವ ಜೊತೆಗೆ ಪ್ರಸ್ತುತ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಹಾಗು ಮೈಸೂರು ಕಾಗದ ಕಾರ್ಖಾನೆ ಪುನಃ ಆರಂಭಗೊಳ್ಳಲು ಇನ್ನೂ ಹೆಚ್ಚಿನ ಹೋರಾಟದ ಅನಿವಾರ್ಯತೆ ಇದ್ದು, ನೇತ್ರಾವತಿಯವರು ಈ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

No comments:

Post a Comment