ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವೀಸ್ ಸೊಸೈಟಿ ೩೫ನೇ ವಾರ್ಷಿಕೋತ್ಸವ ಹಾಗೂ ಸ್ತ್ರೀ ಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ದಶಮಾನೋತ್ಸವದ ಅಂಗವಾಗಿ ಭದ್ರಾವತಿ ತಾಲೂಕಿನ ಕಾರೇಹಳ್ಳಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಜಾಗೃತಿ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಪಾದರ್ ಕ್ಲಿಫರ್ಡ್ ರೋಷನ್ ಪಿಂಟೊ ಉದ್ಘಾಟಿಸಿದರು.
ಭದ್ರಾವತಿ: ಮನುಷ್ಯರಿಗೆ ಆಸ್ತಿ, ಹಣಕ್ಕಿಂತ ಆರೋಗ್ಯವೇ ಮುಖ್ಯ. ಈ ಹಿನ್ನಲೆಯಲ್ಲಿ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕೆಂದು ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವೀಸ್ ಸೊಸೈಟಿ ನಿರ್ದೇಶಕರಾದ ವಂದನಿಯ ಪಾದರ್ ಕ್ಲಿಫರ್ಡ್ ರೋಷನ್ ಪಿಂಟೊ ಹೇಳಿದರು.
ಅವರು ಸೊಸೈಟಿ ೩೫ನೇ ವಾರ್ಷಿಕೋತ್ಸವ ಹಾಗೂ ಸ್ತ್ರೀ ಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ದಶಮಾನೋತ್ಸವದ ಅಂಗವಾಗಿ ತಾಲೂಕಿನ ಕಾರೇಹಳ್ಳಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಜಾಗೃತಿ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಮನುಷ್ಯರ ಬಳಿ ಎಷ್ಟೇ ಹಣ, ಚಿನ್ನ, ಆಸ್ತಿ ಇದ್ದರೂ, ಆಗರ್ಭ ಶ್ರೀಮಂತರಾಗಿದ್ದರೂ ಯಾವುದೂ ಲೆಕ್ಕಕ್ಕೆ ಬರುವುದಿಲ್ಲ. ಆರೋಗ್ಯವಂತನಾಗಿದ್ದರೇ ಮಾತ್ರ ಎಲ್ಲಾ ಶ್ರೀಮಂತಿಕೆ ಅಳಿಸಿಹಾಕಬಹುದು ಎಂದರು.
ಕಾರೇಹಳ್ಳಿ ಧರ್ಮಕೇಂದ್ರದ ವಂದನಿಯ ಪಾದರ್ ಸಂತೋಷ್ ಮಾತನಾಡಿ, ನಗುವಿನಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಶಿವಮೊಗ್ಗ ನಂಜಪ್ಪ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ನಮ್ರತಾ ಉಡುಪ, ಸ್ತನ ಕ್ಯಾನ್ಸರ್, ಗರ್ಭಕೋಶ ಮತ್ತು ಕರುಳು ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿದರು.
ಶಿಬಿರದಲ್ಲಿ ಶಿವಮೊಗ್ಗ ನಂಜಪ್ಪ ಆಸ್ಪತ್ರೆ ಜನರಲ್ ಪಿಜಿಷಿಯನ್ ಹಾಗು ಮೂಳೆ, ಕೀಳು ಮತ್ತು ಮಕ್ಕಳ ತಜ್ಞರು ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡಿದರು. ಶಿವಮೊಗ್ಗ ಐದೃಷ್ಟಿ ಆಸ್ಪತ್ರೆಯಿಂದ ಉಚಿತ ತಪಾಸಣೆ ನಡೆಸಲಾಯಿತು. ಕಾರೇಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸುಮಾರು ೧೪೨ ಗ್ರಾಮಸ್ಥರು ಶಿಬಿರದ ಸದುಪಯೋಗ ಪಡೆದುಕೊಂಡರು.
No comments:
Post a Comment