Sunday, November 26, 2023

ನಾಗರತ್ನ-ಸಿದ್ದಲಿಂಗಯ್ಯ ನಿವಾಸದಲ್ಲಿ ಯಶಸ್ವಿಯಾಗಿ ಜರುಗಿದ ೬೪೮ನೇ ವಚನ ಮಂಟಪ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಸಿದ್ಧಾರೂಢನಗರದ ನಾಗರತ್ನ-ಸಿದ್ದಲಿಂಗಯ್ಯ ಕುಟುಂಬದ ಸಹಯೋಗದೊಂದಿಗೆ ೬೪೮ನೇ ವಚನ ಮಂಟಪ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಹಿರೇನಲ್ಲೂರು ಎಚ್.ಎಸ್ ವೀರಸಂಗಪ್ಪ ದತ್ತಿ-೭೦ ಕಾರ್ಯಕ್ರಮ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ ಉದ್ಘಾಟಿಸಿದರು.
    ಭದ್ರಾವತಿ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಶಾಖೆ ವತಿಯಿಂದ ಸಿದ್ಧಾರೂಢನಗರದ ನಾಗರತ್ನ-ಸಿದ್ದಲಿಂಗಯ್ಯ ಕುಟುಂಬದ ಸಹಯೋಗದೊಂದಿಗೆ ೬೪೮ನೇ ವಚನ ಮಂಟಪ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಹಿರೇನಲ್ಲೂರು ಎಚ್.ಎಸ್ ವೀರಸಂಗಪ್ಪ ದತ್ತಿ-೭೦ ಕಾರ್ಯಕ್ರಮ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ ಉದ್ಘಾಟಿಸಿದರು.
    ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಪತಿ ಹಳಗುಂದ `ಶರಣರ ಚಿಂತನೆಯಲ್ಲಿ ಬದುಕಿನ ಮೌಲ್ಯಗಳ ಪ್ರಸ್ತುತತೆ' ಕುರಿತು ಮಾತನಾಡಿದರು.  
    ಶಿವಮೊಗ್ಗ ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ಮಂಜುನಾಥ್ ವಚನ ಗಾಯನದೊಂದಿಗೆ ಶರಣರ ಮೌಖಿಕ ಚಿಂತನೆ ಕುರಿತು ಮಾತನಾಡಿದರು. ಪರಿಷತ್ ತಾಲೂಕು ಅಧ್ಯಕ್ಷ ಎನ್.ಎಸ್ ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಿದ್ದರು.
    ಪ್ರಮುಖರಾದ ಜಗದೀಶ್ ಕವಿ, ಎಚ್.ಆರ್ ಕುಮಾರಪ್ಪ, ಮಲ್ಲಿಕಾಂಬ ವಿರುಪಾಕ್ಷಪ್ಪ, ನಾಗರತ್ನ, ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಎಂ. ವಿರುಪಾಕ್ಷಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೂರ್ಣಿಮ ಸಿದ್ದಲಿಂಗಯ್ಯ ಸ್ವಾಗತಿಸಿದರು. ನಂದಿನಿ ಮಲ್ಲಿಕಾರ್ಜುನ ನಿರೂಪಿಸಿದರು. ಕತ್ತಲಗೆರೆ ತಿಮ್ಮಪ್ಪ ಮತ್ತು ಕದಳಿ ಮಹಿಳಾ ವೇದಿಕೆ ಸದಸ್ಯರಿಂದ ವಚನ ಗಾಯನ ನಡೆಯಿತು.

No comments:

Post a Comment