ಡಿ. ಮಹೇಶ್ವರ ನಾಯಕ್
ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಗ್ರಂಥಾಲಯದ ಮೇಲ್ವಿಚಾರಕ ಹಾಗು ಮಾಹಿತಿ ಸಹಾಯಕರಾದ ಡಿ. ಮಹೇಶ್ವರ ನಾಯಕ್ ಅವರು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಸಿಬ್ಬಂದಿ ಸೇವಾ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಲ್ಪನಹಳ್ಳಿ ತಾಂಡ ನಿವಾಸಿಯಾಗಿರುವ ಮಹೇಶ್ವರ ನಾಯಕ್ ಅವರು ಹಲವಾರು ವರ್ಷಗಳಿಂದ ಮೇಲ್ವಿಚಾರಕ ಹಾಗು ಮಾಹಿತಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸೊರಬದಲ್ಲಿ ನ.೨೦ರಂದು ನಡೆಯಲಿರುವ ಗ್ರಂಥಾಲಯ ಸಪ್ತಾಹ ಆಚರಣೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಮಹೇಶ್ವರ ನಾಯಕ್ ಅವರನ್ನು ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ಹಾಗು ಕಾರ್ಯದರ್ಶಿ ಸೇರಿದಂತೆ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
No comments:
Post a Comment