Thursday, November 30, 2023

ಶ್ರೀ ಸಂತಕವಿ, ದಾಸಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಮೆರವಣಿಗೆ : ಚಾಲನೆ


ಭದ್ರಾವತಿಯಲ್ಲಿ ಶ್ರೀ ಸಂತಕವಿ, ದಾಸಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಭವ್ಯ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
    ಭದ್ರಾವತಿ : ಶ್ರೀ ಸಂತಕವಿ, ದಾಸಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಭವ್ಯ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
    ಬಿ.ಎಚ್ ರಸ್ತೆ ಲೋಯರ್ ಹುತ್ತಾ ಬಸ್ ನಿಲ್ದಾಣದ ಬಳಿ ಕನಕದಾಸರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪ ನಮನದ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
    ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಎಸ್. ಚೇತನ್‌ಕುಮಾರ್, ತಾಲೂಕು ಕುರುಬ ಸಮಾಜದ ಪದಾಧಿಕಾರಿಗಳು, ನಿರ್ದೇಶಕರು, ಕನಕ ಯುವಪಡೆ, ಸಂಗೊಳ್ಳಿ ರಾಯಣ್ಣ ಯುವ ಪಡೆ, ಕೇಸರಿ ಪಡೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
    ಮೆರವಣಿಗೆ ಬಿ.ಎಚ್ ರಸ್ತೆ ಕೆ.ಎಸ್.ಆರ್.ಟಿ ಮುಖ್ಯ ಬಸ್ ನಿಲ್ದಾಣ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ತಾಲೂಕು ಪಂಚಾಯಿತಿ ಕಛೇರಿ ತಲುಪಿತು.

No comments:

Post a Comment