Wednesday, November 29, 2023

ವೃದ್ಧಾಶ್ರಮದ ಹಿರಿಯರೊಂದಿಗೆ ಮೃತ ವ್ಯಕ್ತಿಯ ಹುಟ್ಟುಹಬ್ಬ

ಕುಟುಂಬ ವರ್ಗದಿಂದ ಸಿಹಿ ಹಂಚಿ, ದಿನಸಿ ಸಾಮಗ್ರಿ ವಿತರಣೆ

ಭದ್ರಾವತಿ ಹೊಸ ಸಿದ್ದಾಪುರದಲ್ಲಿರುವ ಸುರಕ್ಷಾ ಜೀವನ ಸೇವಾ ಟ್ರಸ್ಟ್, ಸುರಕ್ಷಾ ಜೀವನ ವೃದ್ದಾಶ್ರಮ ಮತ್ತು ಅನಾಥಾಶ್ರಮದಲ್ಲಿ ವಿಶೇಷವಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಜನ್ಮದಿನ ಆಚರಿಸುವ ಮೂಲಕ ಗಮನ ಸೆಳೆಯಲಾಯಿತು.
    ಭದ್ರಾವತಿ : ನಗರದ ಹೊಸ ಸಿದ್ದಾಪುರದಲ್ಲಿರುವ ಸುರಕ್ಷಾ ಜೀವನ ಸೇವಾ ಟ್ರಸ್ಟ್, ಸುರಕ್ಷಾ ಜೀವನ ವೃದ್ದಾಶ್ರಮ ಮತ್ತು ಅನಾಥಾಶ್ರಮದಲ್ಲಿ ವಿಶೇಷವಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಜನ್ಮದಿನ ಆಚರಿಸುವ ಮೂಲಕ ಗಮನ ಸೆಳೆಯಲಾಯಿತು.
    ತಾಲೂಕಿನ ದೇವರ ನರಸೀಪುರದ ನಿವಾಸಿಗಳಾದ ಉಮೇಶ್ ಮತ್ತು ಗೌರಮ್ಮ ದಂಪತಿ ಪುತ್ರ  ಜಯಚಂದ್ರ ಕಳೆದ ಸುಮಾರು ೯ ತಿಂಗಳ ಹಿಂದೆ ಮರಣ ಹೊಂದಿದ್ದು, ಇವರ ಜನ್ಮದಿನ ಆಚರಿಸುವ ಮೂಲಕ ಮೌನಾಚರಣೆ ನಡೆಸಿ ಆತ್ಮಕ್ಕೆ ಶಾಂತಿ ಕೋರಲಾಯಿತು.


    ದಿವಂಗತ ಜಯಚಂದ್ರ ಅವರ ಅಣ್ಣ ಅಭಿ ತಮ್ಮನ ನೆನಪಿನಲ್ಲಿ ಆಶ್ರಮಕ್ಕೆ ದಿನಸಿ ಸಾಮಗ್ರಿ ವಿತರಿಸಿ ಹಿರಿಯರಿಗೆ ಸಿಹಿ ಹಂಚಿ ನೋವಿನಲ್ಲೂ ಸಂಭ್ರಮ ಹಂಚಿಕೊಂಡರು. ಸುರಕ್ಷಾ ಜೀವನ ಸೇವಾ ಟ್ರಸ್ಟ್, ಸುರಕ್ಷಾ ಜೀವನ ವೃದ್ದಾಶ್ರಮ ಮತ್ತು ಅನಾಥಾಶ್ರಮದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್, ಟ್ರಸ್ಟಿಗಳು, ಸೇವಾಕರ್ತರು, ದಿವಂಗತ ಜಯಚಂದ್ರ ಕುಟುಂಬ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment