Thursday, November 30, 2023

ದಾರ್ಶನಿಕರ ಆದರ್ಶ ಯುವ ಸಮುದಾಯಕ್ಕೆ ಪರಿಚಯಿಸುವುದು ಜಯಂತಿ ಆಚರಣೆಗಳ ಆಶಯ : ಸಂಗಮೇಶ್ವರ್

ಭದ್ರಾವತಿ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಕನಕ ಜಯಂತಿ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ: ಯುವ ಸಮುದಾಯಕ್ಕೆ ದಾರ್ಶನಿಕರ ಆದರ್ಶಗಳನ್ನು ಪರಿಚಯಿಸುವ ಜೊತೆಗೆ ಮಾರ್ಗದರ್ಶನ ನೀಡುವುದು ಜಯಂತಿ ಆಚರಣೆಗಳ ಉದ್ದೇಶವಾಗಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ತಿಳಿಸಿದರು.
ಅವರು ಗುರುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕನಕ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಮಹಾನೀಯರ ಜಯಂತಿ ಕಾರ್ಯಕ್ರಮಗಳಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಜಯಂತಿ ಆಚರಣೆಗಳ ಆಶಯ ಅರ್ಥ ಮಾಡಿಕೊಳ್ಳುವ ಜೊತೆಗೆ ಸದ್ಬಳಕೆ ಮಾಡಿಕೊಳ್ಳಬೇಕೆಂದರು. 
ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಮಾತನಾಡಿ, ಕುಲ ಕುಲ ಕುಲವೆಂದು ಹೊಡೆದಾಡದಿರಿ ಎನ್ನುವ ಸಂದೇಶದ ಮೂಲಕ ಇಡೀ ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಶ್ರೇಷ್ಠರು ಕನಕದಾಸರು. ದಾಸವಾಣಿಯ ಮೂಲಕ ಸಮಾನತೆ ಬೋಧಿಸಿದ ಇವರು ವಿಶ್ವಮಾನ್ಯರು ಎಂದರು.
ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮತ್ತು ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ಕನಕದಾಸ ಕುರಿತು ಉಪನ್ಯಾಸ ನೀಡಿದರು.  ನಗರಸಭೆ ಸದಸ್ಯರಾದ ಕಾಂತರಾಜು, ಮಂಜುಳಾ ಸುಬ್ಬಣ್ಣ, ಶಶಿಕಲಾ ನಾರಾಯಣಪ್ಪ, ಅನಿತಾ ಮಲ್ಲೇಶ್, ಆರ್. ಶ್ರೇಯಸ್, ಚನ್ನಪ್ಪ, ಮಣಿ ಎಎನ್‌ಎಸ್, ಜಾರ್ಜ್, ಬಸವರಾಜ ಬಿ. ಆನೇಕೊಪ್ಪ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ವಿವಿಧ ಸಮುದಾಯಗಳ ಪ್ರಮುಖರಾದ ಕೆ. ಚಂದ್ರಶೇಖರ್, ಸೆಲ್ವರಾಜ್, ಜುಂಜ್ಯಾನಾಯ್ಕ, ಸಿ. ಜಯಪ್ಪ, ವೈ. ರೇಣುಕಮ್ಮ, ಗಿರೀಶ್, ಎಚ್. ರವಿಕುಮಾರ್, ಅಭಿಲಾಷ್, ಕುಮಾರ್, ಶ್ರೀನಿವಾಸ್(ಪೋಟೋಗ್ರಾಫರ್), ಬಿ.ಕೆ ಜಗನ್ನಾಥ್, ಬಿ.ಕೆ ಶಿವಕುಮಾರ್, ಸುಕನ್ಯ, ಶೋಭ ರವಿಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಗಂಗಣ್ಣ, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಸುಮತಿ ಕಾರಂತ್ ತಂಡ ನಾಡಗೀತೆ ಹಾಡಿತು. ಉಪತಹಸೀಲ್ದಾರ್ ಮಂಜಾನಾಯ್ಕ ನಿರೂಪಿಸಿದರು. ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಥ್ಲೆಟಿಕ್ ವಿಕಲಚೇತನ ಕ್ರೀಡಾಪಟು ಜ್ಯೋತಿ ಸೇರಿದಂತೆ ಸಾಧಕರು, ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. 

No comments:

Post a Comment