Wednesday, November 29, 2023

ಕಾಂಕ್ರೀಟ್ ಕಟ್ಟಡಕ್ಕೆ ದ್ವಿಚಕ್ರ ವಾಹನ ಸವಾರ ಡಿಕ್ಕಿ : ಸ್ಥಳದಲ್ಲಿಯೇ ಸಾವು

    ಭದ್ರಾವತಿ : ದ್ವಿಚಕ್ರ ವಾಹನ ಸವಾರನೋರ್ವ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಾಮಗಾರಿ ಸ್ಥಳದಲ್ಲಿನ ಕಾಂಕ್ರೀಟ್ ಕಟ್ಟಡಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಮಂಗಳವಾರ ರಾತ್ರಿ ನಡೆದಿದೆ.
    ಹೊಸಮನೆ ಓಎಸ್‌ಎಂ ರಸ್ತೆ ನಿವಾಸಿ ಶಶಿಕುಮಾರ್(೪೫) ಮೃತಪಟ್ಟಿದ್ದು, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಶಶಿಕುಮಾರ್ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
    ನಗರದ ವಿಐಎಸ್‌ಎಲ್ ಡಬ್ಬಲ್ ರಸ್ತೆಯಲ್ಲಿ ವಿದ್ಯುತ್ ಕಂಬ ಅಳವಡಿಸಲು ಕಾಮಗಾರಿ ಕೈಗೊಳ್ಳುತ್ತಿದ್ದು, ಶಶಿಕುಮಾರ್ ರಾತ್ರಿ ಸಿಡಿಲು ಸಹಿತ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡು ಕಾಂಕ್ರೀಟ್ ಕಟ್ಟಡಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಸಾರ್ವಜನಿಕರಿಗೆ ಮನವಿ :
    ವಾಹನ ಚಾಲಕರು ಕಡ್ಡಾಯವಾಗಿ ರಸ್ತೆ ನಿಯಮಗಳನ್ನು ಪಾಲಿಸುವ ಜೊತೆಗೆ ಹೆಲ್ಮೆಟ್ ಧರಿಸಿ ಇತರರಿಗೆ ಜಾಗೃತಿ ಮೂಡಿಸಿ ಅಪಘಾತಗಳನ್ನು ತಡೆಗಟ್ಟಲು ಸಹಕರಿಸುವಂತೆ ಸಂಚಾರಿ ಪೊಲೀಸ್ ಠಾಣಾಧಿಕಾರಿ ಶಾಂತಲ ಮನವಿ ಮಾಡಿದ್ದಾರೆ.

No comments:

Post a Comment