Tuesday, November 28, 2023

ತಮಿಳ್ ಸಂಗಮ್‌ವತಿಯಿಂದ ಕನ್ನಡ ರಾಜ್ಯೋತ್ಸವ

ಭದ್ರಾವತಿ ತರೀಕೆರೆ ರಸ್ತೆಯ ತಮಿಳ್ ಸಂಗಮ್ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಸಂಗಮ್ ಅಧ್ಯಕ್ಷ ಕೆ. ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು.
    ಭದ್ರಾವತಿ : ನಗರದ ತರೀಕೆರೆ ರಸ್ತೆಯ ತಮಿಳ್ ಸಂಗಮ್ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಸಂಗಮ್ ಅಧ್ಯಕ್ಷ ಕೆ. ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು.
    ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ಆಗಮುಡಿ ಮೊದಲಿಯಾರ್ ಸಂಘದ ಅಧ್ಯಕ್ಷ ಕೆ. ಮಂಜುನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತಮಿಳ್ ಸಂಗಮ್ ಕಾರ್ಯದರ್ಶಿ ವಿ. ಮಣಿ, ಸಹ ಕಾಯದರ್ಶಿ ವಿ. ರಾಜ, ಖಜಾಂಚಿ ವೀರಭದ್ರನ್, ಸದಸ್ಯ ನಾರಾಯಣಸ್ವಾಮಿ ಸೇರಿದಂತೆ ಎಲ್ಲಾ ಸದಸ್ಯರು, ಸ್ಥಳೀಯರು ಪಾಲ್ಗೊಂಡಿದ್ದರು.

No comments:

Post a Comment