ಭಾನುವಾರ, ಡಿಸೆಂಬರ್ 31, 2023
ಜ.೧ರಂದು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಹುಟ್ಟುಹಬ್ಬ
ಪೇಪರ್ಟೌನ್ ಪೊಲೀಸ್ ಠಾಣೆಯಲ್ಲಿ ರಕ್ತದಾನ ಶಿಬಿರ
ಆಯುರ್ವೇದ ತಜ್ಞ ಚಿಕಿತ್ಸಾ ಕೇಂದ್ರ ‘ಆಯುಷ್’ ಕಾರ್ಯಾರಂಭಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ
ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಕೇವಲ ಭಾಷಣಗಳಿಗೆ ಸೀಮಿತ, ಜವಾಬ್ದಾರಿ ಅರಿಯಲಿ ; ಬಿ.ಕೆ ಸಂಗಮೇಶ್ವರ್
ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ
ಜ.೨ರಂದು ೧೦ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ : ಎಂ.ಎಸ್ ಸುಧಾಮಣಿ
ಶನಿವಾರ, ಡಿಸೆಂಬರ್ 30, 2023
ಜ.೧ರಂದು ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಶುಕ್ರವಾರ, ಡಿಸೆಂಬರ್ 29, 2023
ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಪ್ರಬಂಧ ಮಂಡನೆ : ಡಾ. ವಿದ್ಯಾಶಂಕರ್ಗೆ ಪ್ರಶಸ್ತಿ
ಡಿ.೩೦ರಂದು ನಗರಸಭೆ ಸಾಮಾನ್ಯ ಸಭೆ
ಡಿ.೩೧ರಂದು ‘ಆಯುಷ್’ ತಜ್ಞ ಚಿಕಿತ್ಸಾ ಕೇಂದ್ರ ಕಾರ್ಯಾರಂಭ
ವಿದ್ಯಾರ್ಥಿಗಳು ಏನಾದರೂ ಸಾಧಿಸುವ ಗುರಿ ಹೊಂದಿ : ಕೆ.ಎನ್ ಜನಾರ್ಧನ್
ಅನನ್ಯೋತ್ಸವದಲ್ಲಿ ಡಾ. ಡಿ. ವಿರೇಂದ್ರ ಹೆಗಡೆಯವರ ಆಪ್ತ ಕಾರ್ಯದರ್ಶಿ
ಗುರುವಾರ, ಡಿಸೆಂಬರ್ 28, 2023
ದೇಶದ ಬಹುತೇಕ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣ : ಬಿ.ಕೆ ಸಂಗಮೇಶ್ವರ್
ಗುಡ್ಡದ ನೇರಲಕೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ವಿಡಿಯೋ ವೈರಲ್
ಭದ್ರಾ ಪ್ರೌಢ ಶಾಲೆ ಹಳೇಯ ವಿದ್ಯಾರ್ಥಿಗಳಿಂದ ಗುರುವಂದನೆ
ಸಾರ್ವಜನಿಕರಿಗೆ ತಕ್ಷಣ ಮಾಹಿತಿ ನೀಡಿ, ಆರಂಭಿಕ ಹಂತದಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಿ : ಸುರೇಶ್
ಬುಧವಾರ, ಡಿಸೆಂಬರ್ 27, 2023
ಬುದ್ಧ ವಿಹಾರದಲ್ಲಿ ಹುಣ್ಣಿಮೆ ಕಾರ್ಯಕ್ರಮ
ಪರವಾನಗಿ ಇಲ್ಲದ ಆಟೋ ಚಾಲನೆ : ರು.೧೦,೫೦೦ ದಂಡ
ಮಂಗಳವಾರ, ಡಿಸೆಂಬರ್ 26, 2023
ಪತ್ರಕರ್ತ ಅನಂತ ಕುಮಾರ್ಗೆ ವೀರಯೋಧ ಮುರಳಿ ಪ್ರಶಸ್ತಿ
ಸಮಾಜದ ಅಧಿಕಾರಿಗಳು ಕರ್ತವ್ಯದಲ್ಲಿ ಜಾತಿ ಪ್ರದರ್ಶಿಸಬೇಡಿ, ಹುಟ್ಟಿದ ಜಾತಿ ಬಗ್ಗೆ ಕೀಳರಿಮೆಯನ್ನೂ ಪಡಬೇಡಿ : ಕಾಗಿನೆಲೆ ಶ್ರೀ
ಭದ್ರಾವತಿ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಕನಕ ಗುರುಪೀಠ ಕ್ಷೇತ್ರ ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.
ಭದ್ರಾವತಿ: ಸಮಾಜದ ಅಧಿಕಾರಿಗಳು ಕರ್ತವ್ಯದಲ್ಲಿ ಜಾತಿ ಪ್ರದರ್ಶಿಸಬೇಡಿ. ಆದರೆ ಹುಟ್ಟಿದ ಜಾತಿ ಬಗ್ಗೆ ಕೀಳರಿಮೆಯನ್ನೂ ಪಡಬೇಡಿ ಎಂದು ಶ್ರೀ ಕನಕ ಗುರುಪೀಠ ಕ್ಷೇತ್ರ ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು.
ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ, ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.
ಭದ್ರಾವತಿ ತಾಲೂಕಿನ ಕುರುಬರ ಸಂಘ ಶೈಕ್ಷಣಿಕ ಕ್ರಾಂತಿ ಮೂಲಕ ಇಡೀ ರಾಜ್ಯದಲ್ಲಿ ಗಮನಸೆಳೆದಿದೆ. ಹುಟ್ಟಿದ ಮೇಲೆ ಹುಟ್ಟಿದ ಜಾತಿ ಬಗ್ಗೆ ಕೀಳಿರಿಮೆಪಡಬಾರದು. ಜಾತಿಯ ಇತಿಹಾಸ, ಸಂಸ್ಕೃತಿ ತಿಳಿಯದಿದ್ದರೆ ಮಾತ್ರ ಕೀಳರಿಮೆ ಮೂಡಲು ಸಾಧ್ಯ ಎಂದರು.
ಹಾಲುಮತ ಸಮಾಜದವರು ಒಟ್ಟುಗೂಡಿದರೆಂದರೆ ಇತರರಲ್ಲಿ ಸಂಚಲನ ಮೂಡುತ್ತದೆ. ಆದರೆ ನಾವು ಹಾಲಿನಂತೆ ಶುದ್ಧವಾಗಿ ಬದುಕೋಣ. ಹಾಲುಮತ ಸಮಾಜ ಉತ್ತಮ ಇತಿಹಾಸ ಹಾಗು ಧಾರ್ಮಿಕ ಸಂಸ್ಕೃತಿಯನ್ನು ಒಳಗೊಂಡಿರುವ ಸಮಾಜವಾಗಿದೆ ಎಂದರು.
ವಿದ್ಯೆ ವಿನಯ ಕಲಿಸಬೇಕು. ಸಮಾಜದ ಕಾರ್ಯಕ್ರಮಗಳಲ್ಲಿ ಒಟ್ಟುಗೂಡಿ ಸಮಾಜದ ಏಳಿಗೆಗೆ ಕಾರಣರಾಗಬೇಕೆಂದರು.
ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್ ಮಾತನಾಡಿ, ಸಮಾಜ ಬಾಂಧವರ ನಡುವೆ ಬಾಂಧವ್ಯ ಬೆಳೆಯಲು ಮತ್ತು ಸಮಾಜದ ಪ್ರತಿಭಾವಂತರನ್ನು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮಗಳು ಮುಖ್ಯ. ಸೇವಾ ಭಾವನೆ ರೂಢಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಗೌರವ ದೊರೆಯಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್. ಅಧಿಕಾರಿ ಬಿ.ಎಸ್. ಶೇಖರಪ್ಪ, ದಾವಣಗೆರೆಯ ಪ್ರೋಬೆಷನರಿ ತಹಶೀಲ್ದಾರ್ ಟಿ.ಎನ್. ರಘು, ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷ ಕೆ. ರಂಗನಾಥ್, ನಿರ್ದೇಶಕರಾದ ಎಂ. ಶರತ್, ಡಾ. ಸೌಮ್ಯ ಪ್ರಶಾಂತ್, ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ. ಪ್ರಭಾಕರ್ ಬೀರಯ್ಯ, ತಾಲೂಕು ಕುರುಬರ ಸಂಘದ ಪದಾಧಿಕಾರಿಗಳಾದ ಬಿ.ಎಚ್ ವಸಂತ, ಎನ್. ಸತೀಶ್, ಬಿ.ಎಸ್ ಮಂಜುನಾಥ್, ಬಿ.ಎ ರಾಜೇಶ್, ಜೆ. ಕುಮಾರ್, ಕೆ. ಕೇಶವ, ಎಲ್. ಪ್ರವೀಣ್, ನಿರ್ದೇಶಕರಾದ ಸಣ್ಣಯ್ಯ, ಕೆ. ಲೋಕೇಶ್, ವಿನೋದ್ ಕುಮಾರ್, ಹೇಮಾವತಿ ಶಿವಾನಂದ, ಜೆ.ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪ್ರಶಾಂತ ಸಣ್ಣಕ್ಕಿ ನಿರೂಪಿಸಿದರು.
ಗೂಂಡಾಗಿರಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ : ಜೆಡಿಎಸ್ ಆಗ್ರಹ
ತಾಲೂಕು ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ
ಸೋಮವಾರ, ಡಿಸೆಂಬರ್ 25, 2023
ಶಾಸಕರ ಆಪ್ತ ಸಹಾಯಕ ಈಶ್ವರ್ ಅಪಘಾತದಲ್ಲಿ ಮೃತ
ಮಾಜಿ ಸೈನಿಕರ ಸಂಘದಿಂದ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ
ಹೋರಾಟ ಸ್ಥಳದಲ್ಲಿ ವಾರ್ಷಿಕ ದಿನದರ್ಶಿಕೆ ಬಿಡುಗಡೆ
ಡಿ.೨೬ರಂದು ಜೆಡಿಎಸ್ ಪಕ್ಷದಿಂದ ಧರಣಿ ಸತ್ಯಾಗ್ರಹ
ಭಾನುವಾರ, ಡಿಸೆಂಬರ್ 24, 2023
ಶ್ರೀ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ : ಉಪ್ಪಾರರು ಸಂಘಟನೆಗೊಳ್ಳಲಿ, ಸಮಾಜದ ಮುನ್ನಲೆಗೆ ಬರಲಿ
ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ದೇಶಾದ್ಯಂತ ರಥಯಾತ್ರೆ
ಡಿ.೨೬ರಂದು ಕನ್ನಡ ರಾಜ್ಯೋತ್ಸವ, ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ
ವಿಜೃಂಭಣೆಯಿಂದ ಜರುಗಿದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ
ಶನಿವಾರ, ಡಿಸೆಂಬರ್ 23, 2023
ನಾಗರಕಟ್ಟೆಯಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ
ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಕೊಡುಗೆ ಅಪಾರ : ಎಸ್. ಮಧುಬಂಗಾರಪ್ಪ
ಯರೇಹಳ್ಳಿ ಗ್ರಾಮದ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಂಭ್ರಮಾಚರಣೆ
ಸಂಸದ ಬಿ.ವೈ ರಾಘವೇಂದ್ರ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾ ತನಾಡಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿದ್ದರು.
ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್, ತಹಸೀಲ್ದಾರ್ ಕೆ.ಆರ್ ನಾಗರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷರಾದ ಕೆ. ವಿಠಲರಾವ್, ಆನಂದಪ್ಪ, ಅಧ್ಯಕ್ಷ ಬಿ. ರಮೇಶ್, , ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೈ.ಕೆ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಅಮೃತ ಮಹೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಸ್ವಾಗತಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ನಿರೂಪಿಸಿದರು.
ಭದ್ರಾವತಿ:ಸೆಳೆದ ವೈಕುಂಠನಾಥನ ದರ್ಶನ
ಭದ್ರಾವತಿ: ಪ್ರತಿವರ್ಷದಂತೆ ಈ ವರ್ಷ ಸಹ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು.
ಬೆಳಗ್ಗೆ ೪.೩೦ರಿಂದಲೇ ವೈಕುಂಠನಾಥನ ದರ್ಶನ ಆರಂಭಗೊಂಡಿದ್ದು, ಈ ಬಾರಿ ಸಹ ಸ್ವಾಮಿಯ ದರ್ಶನ ಭಕ್ತರ ಕಣ್ಮನ ಸೆಳೆಯುತ್ತಿದೆ. ದೇವಾಲಯದ ಪ್ರಧಾನ ಅರ್ಚಕರಾದ ವೇ||ಬ್ರ|| ಶ್ರೀ ರಂಗನಾಥ ಶರ್ಮ ಅವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವ ಮೂಲಕ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.
ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ, ತಹಸೀಲ್ದಾರ್ ಕೆ.ಆರ್ ನಾಗರಾಜು, ಡಿ. ದೇವರಾಜ ಅರಸು ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ಅನುರಾಧ ಪಟೇಲ್, ದೇವಾಲಯದ ಸಹಾಯಕ ಅರ್ಚಕ ಶ್ರೀನಿವಾಸ್, ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾರುತಿ, ಪದಾಧಿಕಾರಿಗಳಾದ ಆಶಾ ಪುಟ್ಟಸ್ವಾಮಿ, ಗಿರಿನಾಯ್ಡು, ವಿಶ್ವೇಶ್ವರಗಾಯಕ್ವಾಡ್, ಉಪ ತಹಸೀಲ್ದಾರ್ ಮಂಜಾನಾಯ್ಕ, ಎ.ಟಿ.ಬಸವರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.