ಚೆಕ್ ವಿತರಿಸಿ ಸಾಂತ್ವನ ಹೇಳಿದ ಶಾಸಕ ಬಿ.ಕೆ ಸಂಗಮೇಶ್ವರ್
ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪ ಕಳೆದ ೩ ದಿನಗಳ ಹಿಂದೆ ಸಿಡಿಲು ಬಡಿದು ಮೃತಪಟ್ಟ ಸಹೋದರರಿಬ್ಬರ ಕುಟುಂಬಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸರ್ಕಾರದಿಂದ ತಲಾ ೫ ಲಕ್ಷ ರು. ಪರಿಹಾರದ ಚೆಕ್ ವಿತರಿಸಿ ಸಾಂತ್ವನ ಹೇಳಿದರು.
ಭದ್ರಾವತಿ : ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪ ಕಳೆದ ೩ ದಿನಗಳ ಹಿಂದೆ ಸಿಡಿಲು ಬಡಿದು ಮೃತಪಟ್ಟ ಸಹೋದರರಿಬ್ಬರ ಕುಟುಂಬಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸರ್ಕಾರದಿಂದ ತಲಾ ೫ ಲಕ್ಷ ರು. ಪರಿಹಾರದ ಚೆಕ್ ವಿತರಿಸಿ ಸಾಂತ್ವನ ಹೇಳಿದರು.
ಸಿಡಿಲು ಗುಡುಗು ಸಹಿತ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಜಮೀನಿನಲ್ಲಿದ್ದ ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರ ಮತ್ತು ಸುರೇಶ್ ಸಹೋದರರಿಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದರು.
ಬಿ.ಕೆ ಸಂಗಮೇಶ್ವರ್ರವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಾಂತಕುಮಾರ್, ಯುವ ಮುಖಂಡ ಬಿ.ಎಸ್ ಗಣೇಶ್, ತಾಲೂಕು ಆಡಳಿತದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.
No comments:
Post a Comment